Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...