Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...