Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...