Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...