Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...