Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...