Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...