Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...