Homeಮುಖಪುಟ'ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..'; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

‘ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..’; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

- Advertisement -
- Advertisement -

ಭಾರತೀಯ ಜನತಾ ಪಕ್ಷದ ಹಾಲಿ ಸಂಸದ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ಬಿಜೆಪಿಯು ಕೇಂದ್ರ ಸಚಿವರೊಬ್ಬರಿಗೆ ಟಿಕೆಟ್ ಘೋಷಣೆ ಮಾಡಿದೆ. ಈ ಬಗ್ಗೆ ತಮ್ಮ ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದು, “ನನ್ನ ಅಧಿಕಾರಾವಧಿಯು ಕೊನೆಗೊಳ್ಳುತ್ತಿದ್ದರೂ ಸಹ… ನನ್ನ ಕೊನೆಯ ಉಸಿರು ಇರುವವರೆಗೂ ನನ್ನ ಸಂಬಂಧ (ನಿಮ್ಮೊಂದಿಗೆ) ಕೊನೆಗೊಳ್ಳುವುದಿಲ್ಲ” ಎಂದು ಭಾವಾನಾತ್ಮಕವಾಗಿ ಮಾತನಾಡಿದ್ದಾರೆ.

“ಪಿಲಿಭಿತ್‌ನ ಮಹಾನ್ ಜನರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ಪಡೆದಿದ್ದನ್ನು ನಾನು ಅದೃಷ್ಟಶಾಲಿ ಎಂದು ಪರಿಗಣಿಸಿದ್ದೇನೆ. ನಿಮ್ಮ ಆದರ್ಶಗಳು, ಸರಳತೆ ಮತ್ತು ದಯೆ… ಭಿವೃದ್ಧಿಯಲ್ಲಿ ದೊಡ್ಡ ಕೊಡುಗೆಯನ್ನು ಹೊಂದಿದೆ. ನಿಮ್ಮ ಪ್ರತಿನಿಧಿಯಾಗಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ ಮತ್ತು ನಾನು ಯಾವಾಗಲೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಿಮ್ಮ ಹಿತಾಸಕ್ತಿಗಳನ್ನು ಸಮರ್ಥಿಸಿಕೊಂಡಿದ್ದೇನೆ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

“ಸಂಸದನಾಗಲ್ಲದಿದ್ದರೆ, ಮಗನಾಗಿ ನನ್ನ ಜೀವನದುದ್ದಕ್ಕೂ ನಿಮ್ಮ ಸೇವೆ ಮಾಡಲು ನಾನು ಬದ್ಧನಿದ್ದೇನೆ. ನನ್ನ ಮನೆ ಬಾಗಿಲು ನಿಮಗಾಗಿ ಯಾವಾಗಲೂ ತೆರೆದಿರುತ್ತದೆ. ಯಾವುದೇ ವೆಚ್ಚವನ್ನು ಲೆಕ್ಕಿಸದೆ ನಿಮ್ಮ ಕೆಲಸವನ್ನು ಯಾವಾಗಲೂ ಮಾಡುವುದನ್ನು ಮುಂದುವರಿಸಲು ನಾನು ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ” ಎಂದು ಅವರು ಹೇಳಿದ್ದಾರೆ.

ಪಿಲಿಭಿತ್ ಜತೆಗಿನ ಅವರ ಪರಿಚಯವನ್ನು ನೆನಪಿಸಿಕೊಂಡ ವರುಣ್, ಮೂರು ವರ್ಷದ ಬಾಲಕನಾಗಿದ್ದಾಗ ತನ್ನ ತಾಯಿ ಮೇನಕಾ ಗಾಂಧಿಯೊಂದಿಗೆ 1983ರಲ್ಲಿ ಭೇಟಿ ನೀಡಿದ್ದನ್ನು ಮೆಲುಕು ಹಾಕಿದ್ದಾರೆ.

“1983ರಲ್ಲಿ ಮೂರು ವರ್ಷದ ಹುಡುಗನಾಗಿದ್ದಾಗ ನಾನು ಪಿಲಿಭಿತ್‌ಗೆ ಮೊದಲ ಬಾರಿಗೆ ತನ್ನ ತಾಯಿಯ ಬೆರಳು ಹಿಡಿದು ಬಂದದ್ದು ನೆನಪಿದೆ. ಮುಂದೊಂದು ದಿನ ಈ ಭೂಮಿ ತನ್ನ ಕೆಲಸದ ಸ್ಥಳವಾಗುತ್ತದೆ ಮತ್ತು ಇಲ್ಲಿನ ಜನರು ನನ್ನವಾರಾಗುತ್ತಾರೆ ಎಂಬುದು ಆ ಬಾಲಕನಿಗೆ ಹೇಗೆ ಗೊತ್ತು’ ಎಂದಿದ್ದಾರೆ.

“ಪಿಲಿಭಿತ್ ಮತ್ತು ನನ್ನ ನಡುವಿನ ಸಂಬಂಧವು ಪ್ರೀತಿ ಮತ್ತು ವಿಶ್ವಾಸದಿಂದ ಕೂಡಿದೆ… ಇದು ಯಾವುದೇ ರಾಜಕೀಯ ಗುಣಾಕಾರಕ್ಕಿಂತ ಹೆಚ್ಚಿನದಾಗಿದೆ. ನಾನು ಇದ್ದೆ, ಇದ್ದೇನೆ ಮತ್ತು ನಿಮ್ಮವನಾಗಿರುತ್ತೇನೆ…” ಎಂದು ವರುಣ್ ಗಾಂಧಿ ಹೇಳಿದರು.

ವರುಣ್ ಗಾಂಧಿ ಪಿಲಿಭಿತ್‌ನಿಂದ ಎರಡು ಬಾರಿ ಸಂಸದರಾಗಿದ್ದಾರೆ, ಇದು 1989 ರಿಂದ ಅವರ ತಾಯಿ ಮೇನಕಾ ಗಾಂಧಿಯವರಿಂದ ಗೆದ್ದಾಗಿನಿಂದ ಕುಟುಂಬ ಸಂಬಂಧವಾಗಿದೆ. ಹೆಸರಾಂತ ಪರಿಸರ ಕಾರ್ಯಕರ್ತೆ ಮತ್ತು ಮಾಜಿ ಕೇಂದ್ರ ಸಚಿವೆ, ಮೇನಕಾ ಗಾಂಧಿ ಸ್ವತಂತ್ರ ಅಭ್ಯರ್ಥಿಯಾಗಿ ಬ್ಯಾಕ್ ಟು ಬ್ಯಾಕ್ ಗೆಲುವು ಸೇರಿದಂತೆ ಆರು ಬಾರಿ ಈ ಸ್ಥಾನವನ್ನು ಗೆದ್ದಿದ್ದಾರೆ.

2019ರ ಚುನಾವಣೆಯಲ್ಲಿ ವರುಣ್ ಗಾಂಧಿ ಅವರು ಸಮಾಜವಾದಿ ಪಕ್ಷದ ಹೇಮರಾಜ್ ವರ್ಮಾ ಅವರನ್ನು 2.55 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ಆದರೆ, ಈ ಬಾರಿ ಗಾಂಧಿ ಹೆಸರನ್ನು ಸಂಪೂರ್ಣವಾಗಿ ಕೈಬಿಡಲು ಬಿಜೆಪಿ ನಿರ್ಧರಿಸಿದೆ.

ಇತ್ತೀಚಿನ ವರ್ಷಗಳಲ್ಲಿ 44 ವರ್ಷದ ವರುಣ್ ಅವರು ತಮ್ಮದೇ ಪಕ್ಷದ ಸರ್ಕಾರ ಮತ್ತು ನೀತಿಗಳನ್ನು ಟೀಕಿಸುತ್ತಿದ್ದಾರೆ. ಉದಾಹರಣೆಗೆ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಆಫ್ರಿಕಾದಿಂದ ಚಿರತೆಗಳನ್ನು ಆಮದು ಮಾಡಿಕೊಳ್ಳುವ ಕುರಿತು ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಕೇವಲ ಐದು ತಿಂಗಳಲ್ಲಿ ಒಂಬತ್ತು ಚಿರತೆಗಳು ಸಾವನ್ನಪ್ಪಿದ ನಂತರ ಈ ಹೇಳಿಕೆಗಳು ಬಂದಿವೆ.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಪಕ್ಷ ಸೇರುವಂತೆ ವರುಣ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅವರ ಸಂಪರ್ಕದಿಂದಾಗಿ ಬಿಜೆಪಿಯು ವರುಣ್ ಅವರಿಗೆ ಟಿಕೆಟ್ ಅನ್ನು ನಿರಾಕರಿಸಿದೆ ಎಂದು ಪ್ರತಿಪಾದಿಸಿದ್ದಾರೆ.

“ಅವರು ಇಲ್ಲಿಗೆ ಬರಬೇಕು; ನಾವು ಸಂತೋಷವಾಗಿರುತ್ತೇವೆ. ಅವರು ವಿದ್ಯಾವಂತ ವ್ಯಕ್ತಿ. ಅವರಿಗೆ ಕ್ಲೀನ್ ಇಮೇಜ್ ಇದೆ. ಅವರು ಗಾಂಧಿ ಕುಟುಂಬಕ್ಕೆ ಸಂಬಂಧಿಸಿರುವ ಕಾರಣ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿದೆ. ಅವರು (ಕಾಂಗ್ರೆಸ್‌ಗೆ) ಬರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಇದನ್ನೂ ಓದಿ; ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..’; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...