Homeಮುಖಪುಟ'ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..'; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

‘ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..’; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

- Advertisement -
- Advertisement -

ಭಾರತೀಯ ಜನತಾ ಪಕ್ಷದ ಹಾಲಿ ಸಂಸದ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ಬಿಜೆಪಿಯು ಕೇಂದ್ರ ಸಚಿವರೊಬ್ಬರಿಗೆ ಟಿಕೆಟ್ ಘೋಷಣೆ ಮಾಡಿದೆ. ಈ ಬಗ್ಗೆ ತಮ್ಮ ಕ್ಷೇತ್ರದ ಜನರಿಗೆ ಪತ್ರ ಬರೆದಿದ್ದು, “ನನ್ನ ಅಧಿಕಾರಾವಧಿಯು ಕೊನೆಗೊಳ್ಳುತ್ತಿದ್ದರೂ ಸಹ… ನನ್ನ ಕೊನೆಯ ಉಸಿರು ಇರುವವರೆಗೂ ನನ್ನ ಸಂಬಂಧ (ನಿಮ್ಮೊಂದಿಗೆ) ಕೊನೆಗೊಳ್ಳುವುದಿಲ್ಲ” ಎಂದು ಭಾವಾನಾತ್ಮಕವಾಗಿ ಮಾತನಾಡಿದ್ದಾರೆ.

“ಪಿಲಿಭಿತ್‌ನ ಮಹಾನ್ ಜನರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ಪಡೆದಿದ್ದನ್ನು ನಾನು ಅದೃಷ್ಟಶಾಲಿ ಎಂದು ಪರಿಗಣಿಸಿದ್ದೇನೆ. ನಿಮ್ಮ ಆದರ್ಶಗಳು, ಸರಳತೆ ಮತ್ತು ದಯೆ… ಭಿವೃದ್ಧಿಯಲ್ಲಿ ದೊಡ್ಡ ಕೊಡುಗೆಯನ್ನು ಹೊಂದಿದೆ. ನಿಮ್ಮ ಪ್ರತಿನಿಧಿಯಾಗಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವವಾಗಿದೆ ಮತ್ತು ನಾನು ಯಾವಾಗಲೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಿಮ್ಮ ಹಿತಾಸಕ್ತಿಗಳನ್ನು ಸಮರ್ಥಿಸಿಕೊಂಡಿದ್ದೇನೆ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

“ಸಂಸದನಾಗಲ್ಲದಿದ್ದರೆ, ಮಗನಾಗಿ ನನ್ನ ಜೀವನದುದ್ದಕ್ಕೂ ನಿಮ್ಮ ಸೇವೆ ಮಾಡಲು ನಾನು ಬದ್ಧನಿದ್ದೇನೆ. ನನ್ನ ಮನೆ ಬಾಗಿಲು ನಿಮಗಾಗಿ ಯಾವಾಗಲೂ ತೆರೆದಿರುತ್ತದೆ. ಯಾವುದೇ ವೆಚ್ಚವನ್ನು ಲೆಕ್ಕಿಸದೆ ನಿಮ್ಮ ಕೆಲಸವನ್ನು ಯಾವಾಗಲೂ ಮಾಡುವುದನ್ನು ಮುಂದುವರಿಸಲು ನಾನು ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ” ಎಂದು ಅವರು ಹೇಳಿದ್ದಾರೆ.

ಪಿಲಿಭಿತ್ ಜತೆಗಿನ ಅವರ ಪರಿಚಯವನ್ನು ನೆನಪಿಸಿಕೊಂಡ ವರುಣ್, ಮೂರು ವರ್ಷದ ಬಾಲಕನಾಗಿದ್ದಾಗ ತನ್ನ ತಾಯಿ ಮೇನಕಾ ಗಾಂಧಿಯೊಂದಿಗೆ 1983ರಲ್ಲಿ ಭೇಟಿ ನೀಡಿದ್ದನ್ನು ಮೆಲುಕು ಹಾಕಿದ್ದಾರೆ.

“1983ರಲ್ಲಿ ಮೂರು ವರ್ಷದ ಹುಡುಗನಾಗಿದ್ದಾಗ ನಾನು ಪಿಲಿಭಿತ್‌ಗೆ ಮೊದಲ ಬಾರಿಗೆ ತನ್ನ ತಾಯಿಯ ಬೆರಳು ಹಿಡಿದು ಬಂದದ್ದು ನೆನಪಿದೆ. ಮುಂದೊಂದು ದಿನ ಈ ಭೂಮಿ ತನ್ನ ಕೆಲಸದ ಸ್ಥಳವಾಗುತ್ತದೆ ಮತ್ತು ಇಲ್ಲಿನ ಜನರು ನನ್ನವಾರಾಗುತ್ತಾರೆ ಎಂಬುದು ಆ ಬಾಲಕನಿಗೆ ಹೇಗೆ ಗೊತ್ತು’ ಎಂದಿದ್ದಾರೆ.

“ಪಿಲಿಭಿತ್ ಮತ್ತು ನನ್ನ ನಡುವಿನ ಸಂಬಂಧವು ಪ್ರೀತಿ ಮತ್ತು ವಿಶ್ವಾಸದಿಂದ ಕೂಡಿದೆ… ಇದು ಯಾವುದೇ ರಾಜಕೀಯ ಗುಣಾಕಾರಕ್ಕಿಂತ ಹೆಚ್ಚಿನದಾಗಿದೆ. ನಾನು ಇದ್ದೆ, ಇದ್ದೇನೆ ಮತ್ತು ನಿಮ್ಮವನಾಗಿರುತ್ತೇನೆ…” ಎಂದು ವರುಣ್ ಗಾಂಧಿ ಹೇಳಿದರು.

ವರುಣ್ ಗಾಂಧಿ ಪಿಲಿಭಿತ್‌ನಿಂದ ಎರಡು ಬಾರಿ ಸಂಸದರಾಗಿದ್ದಾರೆ, ಇದು 1989 ರಿಂದ ಅವರ ತಾಯಿ ಮೇನಕಾ ಗಾಂಧಿಯವರಿಂದ ಗೆದ್ದಾಗಿನಿಂದ ಕುಟುಂಬ ಸಂಬಂಧವಾಗಿದೆ. ಹೆಸರಾಂತ ಪರಿಸರ ಕಾರ್ಯಕರ್ತೆ ಮತ್ತು ಮಾಜಿ ಕೇಂದ್ರ ಸಚಿವೆ, ಮೇನಕಾ ಗಾಂಧಿ ಸ್ವತಂತ್ರ ಅಭ್ಯರ್ಥಿಯಾಗಿ ಬ್ಯಾಕ್ ಟು ಬ್ಯಾಕ್ ಗೆಲುವು ಸೇರಿದಂತೆ ಆರು ಬಾರಿ ಈ ಸ್ಥಾನವನ್ನು ಗೆದ್ದಿದ್ದಾರೆ.

2019ರ ಚುನಾವಣೆಯಲ್ಲಿ ವರುಣ್ ಗಾಂಧಿ ಅವರು ಸಮಾಜವಾದಿ ಪಕ್ಷದ ಹೇಮರಾಜ್ ವರ್ಮಾ ಅವರನ್ನು 2.55 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ಆದರೆ, ಈ ಬಾರಿ ಗಾಂಧಿ ಹೆಸರನ್ನು ಸಂಪೂರ್ಣವಾಗಿ ಕೈಬಿಡಲು ಬಿಜೆಪಿ ನಿರ್ಧರಿಸಿದೆ.

ಇತ್ತೀಚಿನ ವರ್ಷಗಳಲ್ಲಿ 44 ವರ್ಷದ ವರುಣ್ ಅವರು ತಮ್ಮದೇ ಪಕ್ಷದ ಸರ್ಕಾರ ಮತ್ತು ನೀತಿಗಳನ್ನು ಟೀಕಿಸುತ್ತಿದ್ದಾರೆ. ಉದಾಹರಣೆಗೆ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಆಫ್ರಿಕಾದಿಂದ ಚಿರತೆಗಳನ್ನು ಆಮದು ಮಾಡಿಕೊಳ್ಳುವ ಕುರಿತು ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಕೇವಲ ಐದು ತಿಂಗಳಲ್ಲಿ ಒಂಬತ್ತು ಚಿರತೆಗಳು ಸಾವನ್ನಪ್ಪಿದ ನಂತರ ಈ ಹೇಳಿಕೆಗಳು ಬಂದಿವೆ.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಪಕ್ಷ ಸೇರುವಂತೆ ವರುಣ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅವರ ಸಂಪರ್ಕದಿಂದಾಗಿ ಬಿಜೆಪಿಯು ವರುಣ್ ಅವರಿಗೆ ಟಿಕೆಟ್ ಅನ್ನು ನಿರಾಕರಿಸಿದೆ ಎಂದು ಪ್ರತಿಪಾದಿಸಿದ್ದಾರೆ.

“ಅವರು ಇಲ್ಲಿಗೆ ಬರಬೇಕು; ನಾವು ಸಂತೋಷವಾಗಿರುತ್ತೇವೆ. ಅವರು ವಿದ್ಯಾವಂತ ವ್ಯಕ್ತಿ. ಅವರಿಗೆ ಕ್ಲೀನ್ ಇಮೇಜ್ ಇದೆ. ಅವರು ಗಾಂಧಿ ಕುಟುಂಬಕ್ಕೆ ಸಂಬಂಧಿಸಿರುವ ಕಾರಣ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿದೆ. ಅವರು (ಕಾಂಗ್ರೆಸ್‌ಗೆ) ಬರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಇದನ್ನೂ ಓದಿ; ಸಂಸದನಾಗಲ್ಲದಿದ್ದರೆ ಮಗನಾಗಿ ನಿಮ್ಮ ಸೇವೆ ಮಾಡಲು ಬದ್ಧ..’; ಪಿಲಿಭಿತ್‌ ಜನರಿಗೆ ಪತ್ರ ಬರೆದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...