Homeಮುಖಪುಟಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಭಾರತವು ಧಾರ್ಮಿಕ ವೈವಿಧ್ಯತೆಯಿಂದ ಕೂಡಿದೆ ಎನ್ನುವುದು ನೆನಪಿರಲಿ. ಜಾರಿಗೊಳಿಸಿದರೆ ಎದುರಾಗುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯಿಸಿ, ”ಮೋದಿ ಅವರು ಅದರ ಬಗ್ಗೆ ಮರುಚಿಂತನೆ ಮಾಡಬೇಕು. ಇದು ವೈವಿಧ್ಯಮಯ ರಾಷ್ಟ್ರವಾಗಿದೆ. ಇಲ್ಲಿ ವಿವಿಧ ಜನಾಂಗಗಳು ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಮುಸ್ಲಿಮರು ತಮ್ಮದೇ ಆದ ಷರಿಯಾ ಕಾನೂನನ್ನು ಹೊಂದಿದ್ದಾರೆ” ಎಂದು  ಹೇಳಿದರು.

”ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸರ್ಕಾರ ಯೋಚಿಸಬೇಕು ಮತ್ತು ಮರುಚಿಂತನೆ ಮಾಡಬೇಕು. ಅವರು ಈ ಎಲ್ಲವನ್ನು ಪರಿಗಣನೆಯಲ್ಲಿ ಇಟ್ಟುಕೊಳ್ಳಬೇಕು ಮತ್ತು ಅದನ್ನು ಜಾರಿ ಮಾಡುವ ಬದಲು, ಪರಿಣಾಮಗಳ ಬಗ್ಗೆ ಯೋಚಿಸಬೇಕು. ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದರೆ ಎದುರಾಗವು ಸಕಂಷ್ಟಗಳ ಬಗ್ಗೆ ಯೋಚಿಸಬೇಕು” ಎಂದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ವಿರೋಧ ಪಕ್ಷದ ನಾಯಕರಿಂದ ಟೀಕೆ

ಮೋದಿ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ”ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಈ ಮೂಲಕ ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು ”ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...