Homeಮುಖಪುಟಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಭಾರತವು ಧಾರ್ಮಿಕ ವೈವಿಧ್ಯತೆಯಿಂದ ಕೂಡಿದೆ ಎನ್ನುವುದು ನೆನಪಿರಲಿ. ಜಾರಿಗೊಳಿಸಿದರೆ ಎದುರಾಗುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯಿಸಿ, ”ಮೋದಿ ಅವರು ಅದರ ಬಗ್ಗೆ ಮರುಚಿಂತನೆ ಮಾಡಬೇಕು. ಇದು ವೈವಿಧ್ಯಮಯ ರಾಷ್ಟ್ರವಾಗಿದೆ. ಇಲ್ಲಿ ವಿವಿಧ ಜನಾಂಗಗಳು ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಮುಸ್ಲಿಮರು ತಮ್ಮದೇ ಆದ ಷರಿಯಾ ಕಾನೂನನ್ನು ಹೊಂದಿದ್ದಾರೆ” ಎಂದು  ಹೇಳಿದರು.

”ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸರ್ಕಾರ ಯೋಚಿಸಬೇಕು ಮತ್ತು ಮರುಚಿಂತನೆ ಮಾಡಬೇಕು. ಅವರು ಈ ಎಲ್ಲವನ್ನು ಪರಿಗಣನೆಯಲ್ಲಿ ಇಟ್ಟುಕೊಳ್ಳಬೇಕು ಮತ್ತು ಅದನ್ನು ಜಾರಿ ಮಾಡುವ ಬದಲು, ಪರಿಣಾಮಗಳ ಬಗ್ಗೆ ಯೋಚಿಸಬೇಕು. ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದರೆ ಎದುರಾಗವು ಸಕಂಷ್ಟಗಳ ಬಗ್ಗೆ ಯೋಚಿಸಬೇಕು” ಎಂದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ವಿರೋಧ ಪಕ್ಷದ ನಾಯಕರಿಂದ ಟೀಕೆ

ಮೋದಿ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ”ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಈ ಮೂಲಕ ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು ”ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...