Homeಮುಖಪುಟಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಭಾರತವು ಧಾರ್ಮಿಕ ವೈವಿಧ್ಯತೆಯಿಂದ ಕೂಡಿದೆ ಎನ್ನುವುದು ನೆನಪಿರಲಿ. ಜಾರಿಗೊಳಿಸಿದರೆ ಎದುರಾಗುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯಿಸಿ, ”ಮೋದಿ ಅವರು ಅದರ ಬಗ್ಗೆ ಮರುಚಿಂತನೆ ಮಾಡಬೇಕು. ಇದು ವೈವಿಧ್ಯಮಯ ರಾಷ್ಟ್ರವಾಗಿದೆ. ಇಲ್ಲಿ ವಿವಿಧ ಜನಾಂಗಗಳು ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಮುಸ್ಲಿಮರು ತಮ್ಮದೇ ಆದ ಷರಿಯಾ ಕಾನೂನನ್ನು ಹೊಂದಿದ್ದಾರೆ” ಎಂದು  ಹೇಳಿದರು.

”ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸರ್ಕಾರ ಯೋಚಿಸಬೇಕು ಮತ್ತು ಮರುಚಿಂತನೆ ಮಾಡಬೇಕು. ಅವರು ಈ ಎಲ್ಲವನ್ನು ಪರಿಗಣನೆಯಲ್ಲಿ ಇಟ್ಟುಕೊಳ್ಳಬೇಕು ಮತ್ತು ಅದನ್ನು ಜಾರಿ ಮಾಡುವ ಬದಲು, ಪರಿಣಾಮಗಳ ಬಗ್ಗೆ ಯೋಚಿಸಬೇಕು. ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದರೆ ಎದುರಾಗವು ಸಕಂಷ್ಟಗಳ ಬಗ್ಗೆ ಯೋಚಿಸಬೇಕು” ಎಂದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ವಿರೋಧ ಪಕ್ಷದ ನಾಯಕರಿಂದ ಟೀಕೆ

ಮೋದಿ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ”ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಈ ಮೂಲಕ ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು ”ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...