HomeUncategorizedನೊವೆಲ್ ಕೊರೋನಾ ವೈರಸ್ ಭಾರತಕ್ಕೆ ಬಂದರೆ?ಬೈ ಡೇಟಾಮ್ಯಾಟಿಕ್ಸ್

ನೊವೆಲ್ ಕೊರೋನಾ ವೈರಸ್ ಭಾರತಕ್ಕೆ ಬಂದರೆ?ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ತಮ್ಮ ಪ್ರಾಮಾಣಿಕ ಸೇವೆಯಿಂದಾಗಿ ರಾಷ್ಟ್ರವ್ಯಾಪಿ ಖ್ಯಾತಿ ಗಳಿಸಿದ ಕರ್ನಾಟಕದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಸಣ್ಣ ವಯಸ್ಸಿನಲ್ಲಿಯೇ ತೀರಿಹೋದರು.

ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡುತ್ತಲೇ ಜೀವನ ಸವೆಸಿದ ಅವರು ಒಂದು ಅರ್ಥದಲ್ಲಿ ಅಭಿನವ ಅಭಿಮನ್ಯು. ಹೈದರಾಬಾದಿನ ಪೋಲೀಸ್ ಅಕಾಡೆಮಿಯಲ್ಲಿ ಯುವ ಅಧಿಕಾರಿಗಳಿಗೆ ಜಂಗಲ್ ಹೋರಾಟದ ತರಬೇತಿ ನೀಡುತ್ತಿದ್ದಾಗ ಅವರಿಗೆ ಸೋಂಕು ತಗುಲಿತು. ಒಂದೇ ದಿವಸದಾಗ ಅದು ಅವರ ಹೃದಯಕ್ಕೆ ವ್ಯಾಪಿಸಿತು. ಅಮೆರಿಕೆಯಲ್ಲಿ ಇದ್ದ ಅವರ ಪತ್ನಿ ಹಾಗೂ ಮಗಳು ಭಾರತಕ್ಕೆ ಬರೋ ಮುಂಚೆ ಅವರ ಕೊನೆಯುಸಿರು ಎಳೆದಿದ್ದರು. ಅದು ಎಚ್1 ಎನ್1 ವೈರಸ್ ಇರಬಹುದು ಅಂತ ಕೆಲವರು ಹೇಳಿದರು.

ಅವರಿಗೆ ಏನಾಗಿತ್ತು? ಅದಕ್ಕೆ ಔಷಧ ಏನು? ಅದನ್ನು ಗುಣಪಡಿಸಲಿಕ್ಕೆ ಯಾಕೆ ಆಗಲಿಲ್ಲ? ಈ ಪ್ರಶ್ನೆಗಳು ಜನರನ್ನು ಕಾಡಿದವು. ಐಜಿಪಿ ಮಟ್ಟದ ಐಪಿಎಸ್ ಅಧಿಕಾರಿಗೆ ಈ ಪರಿಸ್ಥಿತಿಯಾದರೆ ಇತರರಿಗೆ ಏನು ಅಂತ ಎಲ್ಲಾರೂ ಮಾತಾಡಲಿಕ್ಕೆ ಹತ್ತಿದರು. ಇದನ್ನು ಪತ್ತೆ ಹಚ್ಚಲಿಕ್ಕೆ ರಾಜ್ಯಸರಕಾರ ಡಾ. ದೇವಿಪ್ರಸಾದ ಶೆಟ್ಟಿ ಅವರ ಅಧ್ಯಕ್ಷತೆಯೊಳಗ ಒಂದು ಸಮಿತಿ ನೇಮಿಸಿತು. ಅದರ ವರದಿ ಇನ್ನೂ ಬಂದಿಲ್ಲ.

ಈ ವಾರದ ಸುದ್ದಿ ಏನಪಾ ಅಂದರ ಚೈನಾದಾಗ ನೊವೆಲ್ ಕೊರೋನಾ ಅಥವಾ ಹೊಸಾ ಕಿರೀಟಿ ವೈರಸ್ ಅಂತ ಪತ್ತೆ ಆಗೇದ.

ಆರ್ಥೋ ಕರೋನೊವಿರಿನೆ ಜಾತಿಯ ನಿಡೋವಿರಲೇ ಉಪಜಾತಿಯ ಈ ವೈರಸ್ಸು ನೋಡಲಿಕ್ಕೆ ಕಿರೀಟದಂಗ ಕಾಣತದ ಅಂತ ಇದಕ್ಕ ಕೊರೋನಾ ಅಥವಾ ಕಿರೀಟಿ ವೈರಸ್ ಅಂತಾರ. ಇದು ಆರ್‍ಎನ್‍ಎ ವೈರಸ್ಸು, ಪ್ರಾಣಿ ಹಾಗೂ ಮನುಷ್ಯನಲ್ಲಿ ಇದು ಪುಪ್ಪಸದ ಕೆಲಸ ನಿಲ್ಲಸತದ. ಉಸಿರಾಟ ಸಾಧ್ಯವಾಗದೇ ಸಾವು ಬರತದ. ಇದಕ್ಕೆ ಪರಿಹಾರವಾಗಲಿ, ಲಸಿಕೆ ಆಗಲೀ, ಇನ್ನೂ ಇಲ್ಲ.

ಅದು ವುಹಾನ್ ಪ್ರಾಂತದ ಸುಮಾರು 5,000 ಜನಕ್ಕ ಸೋಂಕಿರಬಹುದು ಅಂತ ಅಂದಾಜು. ಅದರಿಂದ ಸುಮಾರು 100 ಜನ ಸತ್ತು ಹೋಗ್ಯಾರ. ಅಲ್ಲಿಂದ ಬಂದವರು ಕೆಲವರಿಗೆ ಅದು ಬಂದಿರಬಹುದು ಅಂತ ಅಮೆರಿಕಾದ ಅವರನ್ನು ಡಾಕ್ಟರ್‍ಗಳ ನೋಡಕೊಳ್ಳಲಿಕ್ಕೆ ಹತ್ಯಾರ. ಭಾರತದಾಗೂ ಸಹ ಕೆಲವರಿಗೆ ಅದು ಬಂದಿರಬಹುದು ಅಂತ ಸಂಶಯ. ಇಲ್ಲಿಯವರೆಗೂ ಅದು ಯಾರಿಗೂ ಬಂದಿರೋ ಖಾತ್ರಿ ಆಗಿಲ್ಲ ಅಂತ ಸರಕಾರ ಹೇಳೇದ. ಭಾರತದ ಎಲ್ಲಾ ವಿಮಾನ ನಿಲ್ದಾಣದೊಳಗ ಒಂದು ವಿಶೇಷ ಕೌಂಟರ್ ಮಾಡಿ ಅವರನ್ನು ಚೆಕ್ ಮಾಡಲಿಕ್ಕೆ ಹತ್ಯಾರ.

ಆದರ ಇದು ಸುದ್ದಿ ಅಲ್ಲ.
ಚೈನಾದ ವುಹಾನ್ ಪ್ರಾಂತದಾಗ ಈ ಸೋಂಕು ಪತ್ತೆ ಆದಮ್ಯಾಲೆ ಅಲ್ಲಿಯವರು ಏನು ಮಾಡಿದರು ಅಂತ ಅನ್ನೋದು ವಿಶೇಷ. ಮೊದಲನೇ ರೋಗಿ ಪತ್ತೆ ಆದ 24 ತಾಸಿನೊಳಗ ಆ ವೈರಸ್ಸಿನ ಸಂಪೂರ್ಣ ಅಧ್ಯಯನ ನಡೀತು. ಅದರ ಜೀನೋಮು ಮ್ಯಾಪಿಂಗ್ ಅಂದರ ವಿಜ್ಞಾನಿಗಳು ಅದರ ವಂಶವಾಹಿನಿ ತಳಿಯನ್ನ ಪ್ರತ್ಯೇಕಿಸಿ ಅಭ್ಯಾಸ ಮಾಡಿದರು. ರೋಗಿಗಳ ಸಂಖ್ಯೆ ಹೆಚ್ಚು ಆದಂಗೆಲ್ಲಾ ಅವರನ್ನ ಪ್ರತ್ಯೇಕಿಸಿ ಇಡಲಾತು. ಇನ್ನೂ ಹೆಚ್ಚು ಆದಂಗ ಇವರ ಸಲುವಾಗೇನ ಒಂದು ವಿಶೇಷ ಆಸ್ಪತ್ರೆ ಕಟ್ಟಬೇಕು ಅಂತ ನಿರ್ಧಾರ ಆತು. ಹತ್ತು ದಿನದಾಗ ಆ ಆಸ್ಪತ್ರೆ ಕಟ್ಟಡ ಕಟ್ಟಬೇಕು ಅಂತ ಒಂದು ನೂರು ಭೂಚಾಲಕ ಯಂತ್ರಗಳನ್ನು ಕೆಲಸಕ್ಕೆ ಹಚ್ಚಲಾಗೇದ. ಅದು ಮುಗೀಲಿಕ್ಕೆ ಬಂದದ. ಅದಕ್ಕೆ ವಿಶೇಷ ತರಬೇತಿ ಪಡೆದ ಡಾಕ್ಟರಗಳನ್ನು ನೇಮಿಸಲಾಗೇದ.

ಸೋಂಕು ಹಬ್ಬೇದ ತಪ್ಪಸಬೇಕು ಅಂತ ಚೈನಾ ಸರಕಾರ ವುಹಾನ ಪ್ರಾಂತದ ಸುಮಾರು 50 ಲಕ್ಷ ಜನರನ್ನು ಒಂದು ವಾರದಾಗ ಬೇರೆ ಕಡೆ ಸ್ಥಳಾಂತರ ಮಾಡೇದ. ಇನ್ನೂ ತೊಂಬತ್ತು ಲಕ್ಷ ಜನರನ್ನು ಸ್ಥಳಾಂತರಿಸತೇವಿ ಅಂತ ಅಲ್ಲಿನ ಸರಕಾರಿ ವಕ್ತಾರರು ಹೇಳ್ಯಾರ. `2012′ ಅನ್ನೋ ಹೆಸರಿನ ಸಿನಿಮಾದಾಗ ವಿಶ್ವದ ಎಲ್ಲಾ ನಾಯಕರು ಲಕ್ಷಾಂತರ ಜನರನ್ನ ಸಮುದ್ರದಾಗ ಬೇರೆ ಕಡೆ ಕರಕೊಂಡು ಹೋಗಬೇಕು ಅಂತ ನಿರ್ಧಾರ ಮಾಡತಾರ. ಆದರ ಅಷ್ಟು ಜನರನ್ನ ಕರಕೊಂಡು ಹೋಗೋವಂಥಾ ಹಡಗು ಕಟ್ಟುವವರು ಯಾರು ಅಂತ ಒಬ್ಬವ ಕೇಳಿದಾಗ ಅಮೆರಿಕದ ವಿಜ್ಞಾನಿಯೊಬ್ಬ ಇಂಥದೆಲ್ಲಾ ಮಾಡೋರ ಚೈನಾದವರಷ್ಟ, ಅಂತ ಹೇಳತಾನ.  ಅಷ್ಟೋತ್ತಿಗೆ ಚೈನಾದವರು ನಾವಾಗಲೇ ಮಾಡಿ ಬಿಟ್ಟೇವಿ ಅಂತ ಹೇಳತಾರ. ಅವರೆಲ್ಲರನ್ನೂ ಸುರಕ್ಷಿತ ಕರಕೊಂಡು ಹೋಗತಾರ.

ಚೈನಾದವರ ಚುರುಕುತನ ಎಲ್ಲರಿಗೂ ಜಗಜ್ಜಾಹೀರು ಆಗೇದ ಅಂತ ಆತು. ನಾವು ಹಿಂಗ ಆಗೋದು ಯಾವಾಗ? ನಮ್ಮಲ್ಲೆ ಒಂದೊಂದು ನಿರ್ಧಾರ ತೊಗೊಳ್ಳೋದು ವರ್ಷಾನುಗಟ್ಟಲೇ ತಡ ಆಗತದ. ಸ್ವಾತಂತ್ರ ಬಂದು 70 ವರ್ಷ ಆದರೂ ಸಹ ‌ ಎಷ್ಟೋ ಜಿಲ್ಲೆ / ತಾಲೂಕುದಾಗ ಶಿಕ್ಷಿತ ಡಾಕ್ಟರುಗಳು ಇಲ್ಲ. ಗಡಿ ತಾಲೂಕುಗಳಾದ ಔರಾದ, ಖಾನಾಪುರ, ಕೊಳ್ಳೇಗಾಲ ಮುಂತಾದ ಕಡೆ ಸ್ನಾತಕೋತ್ತರ ಪದವಿ ಪಡೆದ ಒಬ್ಬ ವೈದ್ಯರೂ ಇಲ್ಲ. ಎಷ್ಟೋ ಜಿಲ್ಲಾ ಆಸ್ಪತ್ರೆಯೊಳಗ ಹಾವು ಕಡಿತಕ್ಕ ಔಷಧಿ ಇಲ್ಲ. ಬ್ರಿಟಿಷರ ಕಾಲದಾಗ ಶುರುವಾದ ಮಲೇರಿಯಾ ಕಂಟ್ರೋಲ್ ಪ್ರೋಗ್ರಾಮು ಇನ್ನೂ ನಡಿಲಿಕ್ಕೆ ಹತ್ತೇದ. ಪ್ರತಿ ಮಾನಸೂನಿನ್ಯಾಗ ಅತಿ ಮುಂದುವರೆದ ಮಂಗಳೂರು ನಗರದಾಗ ಅತಿಹೆಚ್ಚು ಮಲೇರಿಯಾ ರೋಗಿಗಳು ಆಸ್ಪತ್ರೆಗೆ ದಾಖಲಾಗತಾರ. ಆಸ್ಪತ್ರೆಯೊಳಗ ಆಮ್ಲಜನಕ ಇಲ್ಲದೇ ಕೂಸು ಸಾಯತಾವ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಅತಿ ಹೆಚ್ಚಿರುವ ದೇಶಗಳೊಳಗ ನಮ್ಮದೂ ಒಂದು. ಬಾಣಂತಿಯರ ಸಾವು, ಗುಣಪಡಿಸಬಹುದಾದ ರೋಗದಿಂದ ಸಾಯುವವರ ಸಂಖ್ಯೆ ನಮ್ಮ ಸುತ್ತಮುತ್ತಲಿನ ದೇಶಗಳಿಗಿಂತ ನಮ್ಮಲ್ಲಿ ಹೆಚ್ಚು. ಇವು ಯಾವಾಗ ಸಮಾ ಆಗಬೇಕು? ಛಲೋ ಪರಿಚಯ, ಅನುಭವ ಇರೋ ರೋಗಗಳ ಹಣೆಬರಹಾನ ಹಿಂಗ ಅಂದರ ನಮಗೇನರ ಹೊಸಾ ರೋಗ ಬಂದರ ಹೆಂಗ?

ಅಂದಂಗ ಒಂದು ಮಾತು. ಇದು ಜೋಕು ಅಲ್ಲ. ನಡೆದುಹೋದ ವಿಷಯ.

ಕನ್ನಡವನ್ನು ಬಾಳೆಹಣ್ಣು ಸುಲದು ಸಿಪ್ಪಿ ಬಿಸಾಡುವಷ್ಟು ಸುಲಲಿತವಾಗಿ ಮಾತಾಡುವ ಯುವ ನಾಯಕ ಶ್ರೀರಾಮುಲು ಅವರು ಹಿಂದೊಮ್ಮೆ ಆರೋಗ್ಯ ಸಚಿವರಾಗಿದ್ದಾಗ ಒಂದು ಧುರಂದರ ಘೋಷಣೆ ಮಾಡಿದ್ದರು. ನಮ್ಮ ಆಡಳಿತದಾಗ ಆರೋಗ್ಯ ಇಲಾಖೆ ಎಷ್ಟು ಗಟ್ಟಿ ಆಗೇದ ಅಂದರ ನಾವು ಎಚ್1 ಎನ್1 ಅಲ್ಲಾ, ಎಚ್10 ಎನ್10 ಇದ್ದರೂ ನಾವು ಸಂಭಾಳಸತೇವಿ ಅಂತ. ಆ ಅಚ್ಛೇ ದಿನ ಬಂದೀತು ಅಂತ ನಾವೆಲ್ಲಾ ಕಾಯಕೊಂಡು ಇದ್ದೇವಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...