HomeUncategorizedನೊವೆಲ್ ಕೊರೋನಾ ವೈರಸ್ ಭಾರತಕ್ಕೆ ಬಂದರೆ?ಬೈ ಡೇಟಾಮ್ಯಾಟಿಕ್ಸ್

ನೊವೆಲ್ ಕೊರೋನಾ ವೈರಸ್ ಭಾರತಕ್ಕೆ ಬಂದರೆ?ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

ತಮ್ಮ ಪ್ರಾಮಾಣಿಕ ಸೇವೆಯಿಂದಾಗಿ ರಾಷ್ಟ್ರವ್ಯಾಪಿ ಖ್ಯಾತಿ ಗಳಿಸಿದ ಕರ್ನಾಟಕದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಸಣ್ಣ ವಯಸ್ಸಿನಲ್ಲಿಯೇ ತೀರಿಹೋದರು.

ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡುತ್ತಲೇ ಜೀವನ ಸವೆಸಿದ ಅವರು ಒಂದು ಅರ್ಥದಲ್ಲಿ ಅಭಿನವ ಅಭಿಮನ್ಯು. ಹೈದರಾಬಾದಿನ ಪೋಲೀಸ್ ಅಕಾಡೆಮಿಯಲ್ಲಿ ಯುವ ಅಧಿಕಾರಿಗಳಿಗೆ ಜಂಗಲ್ ಹೋರಾಟದ ತರಬೇತಿ ನೀಡುತ್ತಿದ್ದಾಗ ಅವರಿಗೆ ಸೋಂಕು ತಗುಲಿತು. ಒಂದೇ ದಿವಸದಾಗ ಅದು ಅವರ ಹೃದಯಕ್ಕೆ ವ್ಯಾಪಿಸಿತು. ಅಮೆರಿಕೆಯಲ್ಲಿ ಇದ್ದ ಅವರ ಪತ್ನಿ ಹಾಗೂ ಮಗಳು ಭಾರತಕ್ಕೆ ಬರೋ ಮುಂಚೆ ಅವರ ಕೊನೆಯುಸಿರು ಎಳೆದಿದ್ದರು. ಅದು ಎಚ್1 ಎನ್1 ವೈರಸ್ ಇರಬಹುದು ಅಂತ ಕೆಲವರು ಹೇಳಿದರು.

ಅವರಿಗೆ ಏನಾಗಿತ್ತು? ಅದಕ್ಕೆ ಔಷಧ ಏನು? ಅದನ್ನು ಗುಣಪಡಿಸಲಿಕ್ಕೆ ಯಾಕೆ ಆಗಲಿಲ್ಲ? ಈ ಪ್ರಶ್ನೆಗಳು ಜನರನ್ನು ಕಾಡಿದವು. ಐಜಿಪಿ ಮಟ್ಟದ ಐಪಿಎಸ್ ಅಧಿಕಾರಿಗೆ ಈ ಪರಿಸ್ಥಿತಿಯಾದರೆ ಇತರರಿಗೆ ಏನು ಅಂತ ಎಲ್ಲಾರೂ ಮಾತಾಡಲಿಕ್ಕೆ ಹತ್ತಿದರು. ಇದನ್ನು ಪತ್ತೆ ಹಚ್ಚಲಿಕ್ಕೆ ರಾಜ್ಯಸರಕಾರ ಡಾ. ದೇವಿಪ್ರಸಾದ ಶೆಟ್ಟಿ ಅವರ ಅಧ್ಯಕ್ಷತೆಯೊಳಗ ಒಂದು ಸಮಿತಿ ನೇಮಿಸಿತು. ಅದರ ವರದಿ ಇನ್ನೂ ಬಂದಿಲ್ಲ.

ಈ ವಾರದ ಸುದ್ದಿ ಏನಪಾ ಅಂದರ ಚೈನಾದಾಗ ನೊವೆಲ್ ಕೊರೋನಾ ಅಥವಾ ಹೊಸಾ ಕಿರೀಟಿ ವೈರಸ್ ಅಂತ ಪತ್ತೆ ಆಗೇದ.

ಆರ್ಥೋ ಕರೋನೊವಿರಿನೆ ಜಾತಿಯ ನಿಡೋವಿರಲೇ ಉಪಜಾತಿಯ ಈ ವೈರಸ್ಸು ನೋಡಲಿಕ್ಕೆ ಕಿರೀಟದಂಗ ಕಾಣತದ ಅಂತ ಇದಕ್ಕ ಕೊರೋನಾ ಅಥವಾ ಕಿರೀಟಿ ವೈರಸ್ ಅಂತಾರ. ಇದು ಆರ್‍ಎನ್‍ಎ ವೈರಸ್ಸು, ಪ್ರಾಣಿ ಹಾಗೂ ಮನುಷ್ಯನಲ್ಲಿ ಇದು ಪುಪ್ಪಸದ ಕೆಲಸ ನಿಲ್ಲಸತದ. ಉಸಿರಾಟ ಸಾಧ್ಯವಾಗದೇ ಸಾವು ಬರತದ. ಇದಕ್ಕೆ ಪರಿಹಾರವಾಗಲಿ, ಲಸಿಕೆ ಆಗಲೀ, ಇನ್ನೂ ಇಲ್ಲ.

ಅದು ವುಹಾನ್ ಪ್ರಾಂತದ ಸುಮಾರು 5,000 ಜನಕ್ಕ ಸೋಂಕಿರಬಹುದು ಅಂತ ಅಂದಾಜು. ಅದರಿಂದ ಸುಮಾರು 100 ಜನ ಸತ್ತು ಹೋಗ್ಯಾರ. ಅಲ್ಲಿಂದ ಬಂದವರು ಕೆಲವರಿಗೆ ಅದು ಬಂದಿರಬಹುದು ಅಂತ ಅಮೆರಿಕಾದ ಅವರನ್ನು ಡಾಕ್ಟರ್‍ಗಳ ನೋಡಕೊಳ್ಳಲಿಕ್ಕೆ ಹತ್ಯಾರ. ಭಾರತದಾಗೂ ಸಹ ಕೆಲವರಿಗೆ ಅದು ಬಂದಿರಬಹುದು ಅಂತ ಸಂಶಯ. ಇಲ್ಲಿಯವರೆಗೂ ಅದು ಯಾರಿಗೂ ಬಂದಿರೋ ಖಾತ್ರಿ ಆಗಿಲ್ಲ ಅಂತ ಸರಕಾರ ಹೇಳೇದ. ಭಾರತದ ಎಲ್ಲಾ ವಿಮಾನ ನಿಲ್ದಾಣದೊಳಗ ಒಂದು ವಿಶೇಷ ಕೌಂಟರ್ ಮಾಡಿ ಅವರನ್ನು ಚೆಕ್ ಮಾಡಲಿಕ್ಕೆ ಹತ್ಯಾರ.

ಆದರ ಇದು ಸುದ್ದಿ ಅಲ್ಲ.
ಚೈನಾದ ವುಹಾನ್ ಪ್ರಾಂತದಾಗ ಈ ಸೋಂಕು ಪತ್ತೆ ಆದಮ್ಯಾಲೆ ಅಲ್ಲಿಯವರು ಏನು ಮಾಡಿದರು ಅಂತ ಅನ್ನೋದು ವಿಶೇಷ. ಮೊದಲನೇ ರೋಗಿ ಪತ್ತೆ ಆದ 24 ತಾಸಿನೊಳಗ ಆ ವೈರಸ್ಸಿನ ಸಂಪೂರ್ಣ ಅಧ್ಯಯನ ನಡೀತು. ಅದರ ಜೀನೋಮು ಮ್ಯಾಪಿಂಗ್ ಅಂದರ ವಿಜ್ಞಾನಿಗಳು ಅದರ ವಂಶವಾಹಿನಿ ತಳಿಯನ್ನ ಪ್ರತ್ಯೇಕಿಸಿ ಅಭ್ಯಾಸ ಮಾಡಿದರು. ರೋಗಿಗಳ ಸಂಖ್ಯೆ ಹೆಚ್ಚು ಆದಂಗೆಲ್ಲಾ ಅವರನ್ನ ಪ್ರತ್ಯೇಕಿಸಿ ಇಡಲಾತು. ಇನ್ನೂ ಹೆಚ್ಚು ಆದಂಗ ಇವರ ಸಲುವಾಗೇನ ಒಂದು ವಿಶೇಷ ಆಸ್ಪತ್ರೆ ಕಟ್ಟಬೇಕು ಅಂತ ನಿರ್ಧಾರ ಆತು. ಹತ್ತು ದಿನದಾಗ ಆ ಆಸ್ಪತ್ರೆ ಕಟ್ಟಡ ಕಟ್ಟಬೇಕು ಅಂತ ಒಂದು ನೂರು ಭೂಚಾಲಕ ಯಂತ್ರಗಳನ್ನು ಕೆಲಸಕ್ಕೆ ಹಚ್ಚಲಾಗೇದ. ಅದು ಮುಗೀಲಿಕ್ಕೆ ಬಂದದ. ಅದಕ್ಕೆ ವಿಶೇಷ ತರಬೇತಿ ಪಡೆದ ಡಾಕ್ಟರಗಳನ್ನು ನೇಮಿಸಲಾಗೇದ.

ಸೋಂಕು ಹಬ್ಬೇದ ತಪ್ಪಸಬೇಕು ಅಂತ ಚೈನಾ ಸರಕಾರ ವುಹಾನ ಪ್ರಾಂತದ ಸುಮಾರು 50 ಲಕ್ಷ ಜನರನ್ನು ಒಂದು ವಾರದಾಗ ಬೇರೆ ಕಡೆ ಸ್ಥಳಾಂತರ ಮಾಡೇದ. ಇನ್ನೂ ತೊಂಬತ್ತು ಲಕ್ಷ ಜನರನ್ನು ಸ್ಥಳಾಂತರಿಸತೇವಿ ಅಂತ ಅಲ್ಲಿನ ಸರಕಾರಿ ವಕ್ತಾರರು ಹೇಳ್ಯಾರ. `2012′ ಅನ್ನೋ ಹೆಸರಿನ ಸಿನಿಮಾದಾಗ ವಿಶ್ವದ ಎಲ್ಲಾ ನಾಯಕರು ಲಕ್ಷಾಂತರ ಜನರನ್ನ ಸಮುದ್ರದಾಗ ಬೇರೆ ಕಡೆ ಕರಕೊಂಡು ಹೋಗಬೇಕು ಅಂತ ನಿರ್ಧಾರ ಮಾಡತಾರ. ಆದರ ಅಷ್ಟು ಜನರನ್ನ ಕರಕೊಂಡು ಹೋಗೋವಂಥಾ ಹಡಗು ಕಟ್ಟುವವರು ಯಾರು ಅಂತ ಒಬ್ಬವ ಕೇಳಿದಾಗ ಅಮೆರಿಕದ ವಿಜ್ಞಾನಿಯೊಬ್ಬ ಇಂಥದೆಲ್ಲಾ ಮಾಡೋರ ಚೈನಾದವರಷ್ಟ, ಅಂತ ಹೇಳತಾನ.  ಅಷ್ಟೋತ್ತಿಗೆ ಚೈನಾದವರು ನಾವಾಗಲೇ ಮಾಡಿ ಬಿಟ್ಟೇವಿ ಅಂತ ಹೇಳತಾರ. ಅವರೆಲ್ಲರನ್ನೂ ಸುರಕ್ಷಿತ ಕರಕೊಂಡು ಹೋಗತಾರ.

ಚೈನಾದವರ ಚುರುಕುತನ ಎಲ್ಲರಿಗೂ ಜಗಜ್ಜಾಹೀರು ಆಗೇದ ಅಂತ ಆತು. ನಾವು ಹಿಂಗ ಆಗೋದು ಯಾವಾಗ? ನಮ್ಮಲ್ಲೆ ಒಂದೊಂದು ನಿರ್ಧಾರ ತೊಗೊಳ್ಳೋದು ವರ್ಷಾನುಗಟ್ಟಲೇ ತಡ ಆಗತದ. ಸ್ವಾತಂತ್ರ ಬಂದು 70 ವರ್ಷ ಆದರೂ ಸಹ ‌ ಎಷ್ಟೋ ಜಿಲ್ಲೆ / ತಾಲೂಕುದಾಗ ಶಿಕ್ಷಿತ ಡಾಕ್ಟರುಗಳು ಇಲ್ಲ. ಗಡಿ ತಾಲೂಕುಗಳಾದ ಔರಾದ, ಖಾನಾಪುರ, ಕೊಳ್ಳೇಗಾಲ ಮುಂತಾದ ಕಡೆ ಸ್ನಾತಕೋತ್ತರ ಪದವಿ ಪಡೆದ ಒಬ್ಬ ವೈದ್ಯರೂ ಇಲ್ಲ. ಎಷ್ಟೋ ಜಿಲ್ಲಾ ಆಸ್ಪತ್ರೆಯೊಳಗ ಹಾವು ಕಡಿತಕ್ಕ ಔಷಧಿ ಇಲ್ಲ. ಬ್ರಿಟಿಷರ ಕಾಲದಾಗ ಶುರುವಾದ ಮಲೇರಿಯಾ ಕಂಟ್ರೋಲ್ ಪ್ರೋಗ್ರಾಮು ಇನ್ನೂ ನಡಿಲಿಕ್ಕೆ ಹತ್ತೇದ. ಪ್ರತಿ ಮಾನಸೂನಿನ್ಯಾಗ ಅತಿ ಮುಂದುವರೆದ ಮಂಗಳೂರು ನಗರದಾಗ ಅತಿಹೆಚ್ಚು ಮಲೇರಿಯಾ ರೋಗಿಗಳು ಆಸ್ಪತ್ರೆಗೆ ದಾಖಲಾಗತಾರ. ಆಸ್ಪತ್ರೆಯೊಳಗ ಆಮ್ಲಜನಕ ಇಲ್ಲದೇ ಕೂಸು ಸಾಯತಾವ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ ಅತಿ ಹೆಚ್ಚಿರುವ ದೇಶಗಳೊಳಗ ನಮ್ಮದೂ ಒಂದು. ಬಾಣಂತಿಯರ ಸಾವು, ಗುಣಪಡಿಸಬಹುದಾದ ರೋಗದಿಂದ ಸಾಯುವವರ ಸಂಖ್ಯೆ ನಮ್ಮ ಸುತ್ತಮುತ್ತಲಿನ ದೇಶಗಳಿಗಿಂತ ನಮ್ಮಲ್ಲಿ ಹೆಚ್ಚು. ಇವು ಯಾವಾಗ ಸಮಾ ಆಗಬೇಕು? ಛಲೋ ಪರಿಚಯ, ಅನುಭವ ಇರೋ ರೋಗಗಳ ಹಣೆಬರಹಾನ ಹಿಂಗ ಅಂದರ ನಮಗೇನರ ಹೊಸಾ ರೋಗ ಬಂದರ ಹೆಂಗ?

ಅಂದಂಗ ಒಂದು ಮಾತು. ಇದು ಜೋಕು ಅಲ್ಲ. ನಡೆದುಹೋದ ವಿಷಯ.

ಕನ್ನಡವನ್ನು ಬಾಳೆಹಣ್ಣು ಸುಲದು ಸಿಪ್ಪಿ ಬಿಸಾಡುವಷ್ಟು ಸುಲಲಿತವಾಗಿ ಮಾತಾಡುವ ಯುವ ನಾಯಕ ಶ್ರೀರಾಮುಲು ಅವರು ಹಿಂದೊಮ್ಮೆ ಆರೋಗ್ಯ ಸಚಿವರಾಗಿದ್ದಾಗ ಒಂದು ಧುರಂದರ ಘೋಷಣೆ ಮಾಡಿದ್ದರು. ನಮ್ಮ ಆಡಳಿತದಾಗ ಆರೋಗ್ಯ ಇಲಾಖೆ ಎಷ್ಟು ಗಟ್ಟಿ ಆಗೇದ ಅಂದರ ನಾವು ಎಚ್1 ಎನ್1 ಅಲ್ಲಾ, ಎಚ್10 ಎನ್10 ಇದ್ದರೂ ನಾವು ಸಂಭಾಳಸತೇವಿ ಅಂತ. ಆ ಅಚ್ಛೇ ದಿನ ಬಂದೀತು ಅಂತ ನಾವೆಲ್ಲಾ ಕಾಯಕೊಂಡು ಇದ್ದೇವಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...