Homeಕರ್ನಾಟಕOBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

OBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಕೂಡ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರು ಅವರು, ”ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.

”ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದುʼʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.

”ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

”ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

”ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

”ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ” ಎಂದು ಹೇಳಿದರು.

”2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು” ಎಂದು ವಿವರಿಸಿದ್ದಾರೆ.

”2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ” ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಸೂದೆಯು ಮಹಿಳೆಯರ ಓಲೈಕೆಯ ಪ್ರಯತ್ನವಾಗಿದೆ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...