Homeಕರ್ನಾಟಕOBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

OBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಕೂಡ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರು ಅವರು, ”ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.

”ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದುʼʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.

”ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

”ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

”ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

”ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ” ಎಂದು ಹೇಳಿದರು.

”2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು” ಎಂದು ವಿವರಿಸಿದ್ದಾರೆ.

”2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ” ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಸೂದೆಯು ಮಹಿಳೆಯರ ಓಲೈಕೆಯ ಪ್ರಯತ್ನವಾಗಿದೆ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...