Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...