Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...