Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....