Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...