Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...