HomeಮುಖಪುಟPFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

- Advertisement -
- Advertisement -

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಆಡಳಿತರೂಡ ಪಕ್ಷ ಸಿಪಿಎಂ ಸಹ ಆರ್‌ಎಸ್‌ಎಸ್‌ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿದೆ. “ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ” ಎಂದು ಪಕ್ಷ ಹೇಳಿದೆ.

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಸಮಾಜದಲ್ಲಿ ದ್ವೇಷವನ್ನು ಹರಡಲು ಆರ್‌ಎಸ್‌ಎಸ್ ಸಮಾನ ಜವಾಬ್ದಾರಿಯನ್ನು ಹೊಂದಿದೆ ಮತ್ತು ಇದು ದೇಶದಲ್ಲಿ ಅನೇಕ ಹಿಂಸಾತ್ಮಕ ಘಟನೆಗಳ ಹಿಂದೆ ಇದರ ಪಾತ್ರವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಜೊತೆಗೆ, ಅದರ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್(NWF), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್-ಕೇರಳ ಸಂಘಟನೆಗಳನ್ನು ಕೂಡಾ ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...