HomeಮುಖಪುಟPFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

- Advertisement -
- Advertisement -

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಆಡಳಿತರೂಡ ಪಕ್ಷ ಸಿಪಿಎಂ ಸಹ ಆರ್‌ಎಸ್‌ಎಸ್‌ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿದೆ. “ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ” ಎಂದು ಪಕ್ಷ ಹೇಳಿದೆ.

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಸಮಾಜದಲ್ಲಿ ದ್ವೇಷವನ್ನು ಹರಡಲು ಆರ್‌ಎಸ್‌ಎಸ್ ಸಮಾನ ಜವಾಬ್ದಾರಿಯನ್ನು ಹೊಂದಿದೆ ಮತ್ತು ಇದು ದೇಶದಲ್ಲಿ ಅನೇಕ ಹಿಂಸಾತ್ಮಕ ಘಟನೆಗಳ ಹಿಂದೆ ಇದರ ಪಾತ್ರವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಜೊತೆಗೆ, ಅದರ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್(NWF), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್-ಕೇರಳ ಸಂಘಟನೆಗಳನ್ನು ಕೂಡಾ ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...