Homeಮುಖಪುಟಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

- Advertisement -
- Advertisement -

ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ಪಡಿತರ ಮಾಫಿಯಾದ ಪ್ರಭಾವದ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ದೆಹಲಿಯಲ್ಲಿ ‘ಡೋರ್‌ಸ್ಟೆಪ್ ಡೆಲಿವರಿ ಆಫ್ ರೇಷನ್’ ಯೋಜನೆ ಜಾರಿಗೆ ಬರುವ ಎರಡು ದಿನಗಳ ಮೊದಲೇ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಿದೆ. ಪಿಜ್ಜಾ, ಬರ್ಗರ್‌ಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಬಟ್ಟೆಗಳನ್ನು ಮನೆಗಳಿಗೆ ತಲುಪಿಸಬಹುದಾದರೆ, ಪಡಿತರವನ್ನು ಯಾಕೆ ಜನರ ಮನೆ ಬಾಗಿಲಿಗೆ ತಲುಪಿಸಲು ಆಗುವುದಿಲ್ಲ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ಮೊದಲ ಬಾರಿಗೆ, ಪಡಿತರ ಮಾಫಿಯಾವನ್ನು ಪರೀಕ್ಷಿಸಲು ಸರ್ಕಾರ ಒಂದು ಹೆಜ್ಜೆ ಇಟ್ಟಿದೆ. ಪಡಿತರ ಮಾಫಿಯಾದವರು ಎಷ್ಟು ಪ್ರಬಲರಾಗಿದ್ದಾರೆಂದರೆ, ಈ ಯೋಜನೆ ಜಾರಿಗೆ ಬರುವ ಒಂದು ವಾರದ ಮುಂಚೆಯೇ ಅವರು ಯೋಜನೆಯನ್ನು ರದ್ದುಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನೆ ಬಾಗಿಲಿನ ಪಡಿತರ ವಿತರಣಾ ಯೋಜನೆಯಿಂದ ರಾಷ್ಟ್ರದ ರಾಜಧಾನಿಯ 72 ಲಕ್ಷ ಪಡಿತರ ಕಾರ್ಡುದಾರರಿಗೆ ಲಾಭವಾಗಬಹುದೆಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಸರ್ಕಾರ ಈ ಯೋಜನೆಯನ್ನು ಮಾರ್ಚ್‌ನಲ್ಲಿ ರೂಪಿಸಿತ್ತು.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ಡಿಜಿಟಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಈ ಯೋಜನೆಯ ಅನುಷ್ಠಾನಕ್ಕೆ ದೆಹಲಿ ಸರ್ಕಾರ ಅನುಮತಿ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವ ಹೇಳಿಕೆಯನ್ನು ತಿಳಿಸಿದ್ದಾರೆ. “ಯೋಜನೆ ಅನುಷ್ಠಾನಕ್ಕೆ ದೆಹಲಿ ಸರ್ಕಾರಕ್ಕೆ ಕೇಂದ್ರದ ಅನುಮೋದನೆ ಅಗತ್ಯವಿರಲಿಲ್ಲ, ಆದರೂ ಯಾವುದೇ ವಿವಾದ ಬರದಂತೆ ತಪ್ಪಿಸಲು ಐದು ಬಾರಿ ಅನುಮತಿ ಕೋರಿದ್ದೇವು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಖಂಡ್ ಸರ್ಕಾರಗಳು, ರೈತರು ಮತ್ತು ಲಕ್ಷದ್ವೀಪದ ಜನರು ಸೇರಿದಂತೆ ಎಲ್ಲರೊಂದಿಗೆ ಯುದ್ಧಕ್ಕೆ ನಿಂತಿದೆ ಎಂದು  ಆರೋಪಿಸಿದ್ದಾರೆ.

“ಕೇಂದ್ರ ಸರ್ಕಾರ ಎಲ್ಲರ ವಿರುದ್ಧ ಹೋರಾಡುತ್ತಿದೆ ಎಂದು ಜನರು ಬೇಸರಗೊಂಡಿದ್ದಾರೆ. ನಾವು ಈ ರೀತಿ ಬಡಿದಾಡುತ್ತಿದ್ದರೆ, ಕೊರೊನಾ ಸೋಂಕನ್ನು ಹೇಗೆ ನಿಭಾಯಿಸುತ್ತೇವೆ..? ಪಡಿತರವು ಎಎಪಿ ಅಥವಾ ಬಿಜೆಪಿಗೆ ಸೇರಿಲ್ಲ. ಯೋಜನೆಯನ್ನು ಕಾರ್ಯಗತಗೊಳಿಸಲಿ, ಇದರ ಸಂಪೂರ್ಣ ಕ್ರೇಡಿಟ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುತ್ತೇನೆ. ದೆಹಲಿಯ 70 ಲಕ್ಷ ಬಡ ಜನರ ಪರವಾಗಿ ನಾನು ಕೈ ಮುಗಿದು ಈ ಯೋಜನೆಯನ್ನು ಜಾರಿಗೆ ತರಲು ವಿನಂತಿಸುತ್ತೇನೆ “ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷವು ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾದ ಈ ಯೋಜನೆಯನ್ನು ಜಾರಿಗೆ ತರಲು ದೆಹಲಿ ಸರ್ಕಾರವು, ಕಳೆದ ವರ್ಷ ಜುಲೈನಲ್ಲಿ ದೆಹಲಿಯ ಎಲ್ಲಾ ಕಾರ್ಡುದಾರರಿಗೆ ಪಡಿತರವನ್ನು ಮನೆಗೆ ತಲುಪಿಸಲು ಅನುಮತಿ ನೀಡಿತ್ತು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತನ್ನ ವಿರೋಧಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯರಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಮನಗಂಡಿರುವ ನಮ್ಮ ಪ್ರದಾನಿಯವರು; ತಮ್ಮ ರಾಜಕೀಯ ವಿರೋಧಿಗಳ ಜನಪ್ರಿಯ ಕಾರ್ಯಕ್ರಮಗಳನ್ನು ಈ ರೀತಿಯಲ್ಲಿ, ಸಂವಿಧಾನ ಬಾಹಿರವಾಗಿ ಹತ್ತಿಕ್ಕುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...