Homeಮುಖಪುಟಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

- Advertisement -
- Advertisement -

ದೆಹಲಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ಪಡಿತರ ಮಾಫಿಯಾದ ಪ್ರಭಾವದ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ದೆಹಲಿಯಲ್ಲಿ ‘ಡೋರ್‌ಸ್ಟೆಪ್ ಡೆಲಿವರಿ ಆಫ್ ರೇಷನ್’ ಯೋಜನೆ ಜಾರಿಗೆ ಬರುವ ಎರಡು ದಿನಗಳ ಮೊದಲೇ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಿದೆ. ಪಿಜ್ಜಾ, ಬರ್ಗರ್‌ಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಬಟ್ಟೆಗಳನ್ನು ಮನೆಗಳಿಗೆ ತಲುಪಿಸಬಹುದಾದರೆ, ಪಡಿತರವನ್ನು ಯಾಕೆ ಜನರ ಮನೆ ಬಾಗಿಲಿಗೆ ತಲುಪಿಸಲು ಆಗುವುದಿಲ್ಲ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ಮೊದಲ ಬಾರಿಗೆ, ಪಡಿತರ ಮಾಫಿಯಾವನ್ನು ಪರೀಕ್ಷಿಸಲು ಸರ್ಕಾರ ಒಂದು ಹೆಜ್ಜೆ ಇಟ್ಟಿದೆ. ಪಡಿತರ ಮಾಫಿಯಾದವರು ಎಷ್ಟು ಪ್ರಬಲರಾಗಿದ್ದಾರೆಂದರೆ, ಈ ಯೋಜನೆ ಜಾರಿಗೆ ಬರುವ ಒಂದು ವಾರದ ಮುಂಚೆಯೇ ಅವರು ಯೋಜನೆಯನ್ನು ರದ್ದುಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮನೆ ಬಾಗಿಲಿನ ಪಡಿತರ ವಿತರಣಾ ಯೋಜನೆಯಿಂದ ರಾಷ್ಟ್ರದ ರಾಜಧಾನಿಯ 72 ಲಕ್ಷ ಪಡಿತರ ಕಾರ್ಡುದಾರರಿಗೆ ಲಾಭವಾಗಬಹುದೆಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಸರ್ಕಾರ ಈ ಯೋಜನೆಯನ್ನು ಮಾರ್ಚ್‌ನಲ್ಲಿ ರೂಪಿಸಿತ್ತು.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ಡಿಜಿಟಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಈ ಯೋಜನೆಯ ಅನುಷ್ಠಾನಕ್ಕೆ ದೆಹಲಿ ಸರ್ಕಾರ ಅನುಮತಿ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವ ಹೇಳಿಕೆಯನ್ನು ತಿಳಿಸಿದ್ದಾರೆ. “ಯೋಜನೆ ಅನುಷ್ಠಾನಕ್ಕೆ ದೆಹಲಿ ಸರ್ಕಾರಕ್ಕೆ ಕೇಂದ್ರದ ಅನುಮೋದನೆ ಅಗತ್ಯವಿರಲಿಲ್ಲ, ಆದರೂ ಯಾವುದೇ ವಿವಾದ ಬರದಂತೆ ತಪ್ಪಿಸಲು ಐದು ಬಾರಿ ಅನುಮತಿ ಕೋರಿದ್ದೇವು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ, ದೆಹಲಿ ಮತ್ತು ಜಾರ್ಖಂಡ್ ಸರ್ಕಾರಗಳು, ರೈತರು ಮತ್ತು ಲಕ್ಷದ್ವೀಪದ ಜನರು ಸೇರಿದಂತೆ ಎಲ್ಲರೊಂದಿಗೆ ಯುದ್ಧಕ್ಕೆ ನಿಂತಿದೆ ಎಂದು  ಆರೋಪಿಸಿದ್ದಾರೆ.

“ಕೇಂದ್ರ ಸರ್ಕಾರ ಎಲ್ಲರ ವಿರುದ್ಧ ಹೋರಾಡುತ್ತಿದೆ ಎಂದು ಜನರು ಬೇಸರಗೊಂಡಿದ್ದಾರೆ. ನಾವು ಈ ರೀತಿ ಬಡಿದಾಡುತ್ತಿದ್ದರೆ, ಕೊರೊನಾ ಸೋಂಕನ್ನು ಹೇಗೆ ನಿಭಾಯಿಸುತ್ತೇವೆ..? ಪಡಿತರವು ಎಎಪಿ ಅಥವಾ ಬಿಜೆಪಿಗೆ ಸೇರಿಲ್ಲ. ಯೋಜನೆಯನ್ನು ಕಾರ್ಯಗತಗೊಳಿಸಲಿ, ಇದರ ಸಂಪೂರ್ಣ ಕ್ರೇಡಿಟ್ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುತ್ತೇನೆ. ದೆಹಲಿಯ 70 ಲಕ್ಷ ಬಡ ಜನರ ಪರವಾಗಿ ನಾನು ಕೈ ಮುಗಿದು ಈ ಯೋಜನೆಯನ್ನು ಜಾರಿಗೆ ತರಲು ವಿನಂತಿಸುತ್ತೇನೆ “ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷವು ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾದ ಈ ಯೋಜನೆಯನ್ನು ಜಾರಿಗೆ ತರಲು ದೆಹಲಿ ಸರ್ಕಾರವು, ಕಳೆದ ವರ್ಷ ಜುಲೈನಲ್ಲಿ ದೆಹಲಿಯ ಎಲ್ಲಾ ಕಾರ್ಡುದಾರರಿಗೆ ಪಡಿತರವನ್ನು ಮನೆಗೆ ತಲುಪಿಸಲು ಅನುಮತಿ ನೀಡಿತ್ತು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತನ್ನ ವಿರೋಧಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯರಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಮನಗಂಡಿರುವ ನಮ್ಮ ಪ್ರದಾನಿಯವರು; ತಮ್ಮ ರಾಜಕೀಯ ವಿರೋಧಿಗಳ ಜನಪ್ರಿಯ ಕಾರ್ಯಕ್ರಮಗಳನ್ನು ಈ ರೀತಿಯಲ್ಲಿ, ಸಂವಿಧಾನ ಬಾಹಿರವಾಗಿ ಹತ್ತಿಕ್ಕುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...