Homeಮುಖಪುಟಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಕರ್ನಾಟಕದ ನಾಲ್ಕೂ ದಿಕ್ಕುಗಳಿಂದ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದು, ಸುಮಾರು 5000 ವಾಹನಗಳು ಬೆಂಗಳೂರಿನಲ್ಲಿ ಪರೇಡ್ ನಡೆಸಲಿವೆ.

- Advertisement -
- Advertisement -

ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ, ಅದೇ ಜಾಗದಲ್ಲಿ ರಸ್ತೆ ತಡೆ ನಡೆಸುವುದಲ್ಲದೇ ಎಲ್ಲಾ ಹೆದ್ದಾರಿಗಳನ್ನು ಬಂದ್ ಮಾಡಿ ರಾಜ್ಯಾದ್ಯಂತ ಸಂಚಾರ ಅಸ್ತವ್ಯಸ್ತ ಮಾಡುತ್ತೇವೆ ಎಂದು ಕ.ರಾ.ರೈ.ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನವರಿ 26 ರಂದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದೇವೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಟ್ರ್ಯಾಕ್ಟರ್‌ಗಳು ಬೆಂಗಳೂರಿನತ್ತ ಹೊರಟಿವೆ. ಆದರೆ ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆಯುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಪೊಲೀಸರು ಗೌರವಯುತವಾಗಿ ಟ್ರ್ಯಾಕ್ಟರ್‌ಗಳು ಬೆಂಗಳೂರಿಗೆ ಬರಲು ಅನುಮತಿ ಕೊಡಬೇಕು. ಇಲ್ಲಿದಿದ್ದರೆ ಸಂಚಾರ ಅಸ್ತವ್ಯಸ್ತವಾದರೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿ ನಮ್ಮ ಹೋರಾಟವನ್ನು ಹತ್ತಿಕ್ಕಲು ನೋಡುತ್ತಿದೆ. ಇದು ಸರಿಯಾದುದ್ದಲ್ಲ. ಲಕ್ಷಾಂತರ ಟ್ರ್ಯಾಕ್ಟರ್‌ಗಳು ಸೇರುವ ದೆಹಲಿ ಹೋರಾಟಕ್ಕೆ ಪೊಲೀಸರು ಅನುಮತಿ ನೀಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಪೊಲೀಸರು ಅನುಮತಿ ನೀಡಬೇಕು. ಒಂದು ವೇಳೆ ಜನವರಿ 26 ರಂದು ನಮ್ಮ ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯದ ಎಲ್ಲಾ ಹೆದ್ದಾರಿಗಳನ್ನು ಅನಿರ್ದಿಷ್ಟಾವಧಿ ಬಂದ್ ಮಾಡಿ ಸಂಚಾರ ಅಸ್ತವ್ಯಸ್ತ ಮಾಡಬೇಕಾಗುತ್ತದೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು ಎಂದು ನಾಗೇಂದ್ರರವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್ ಅಧಿಕಾರಿಗಳಲ್ಲಿ ಒಂದು ವಿನಂತಿ ಮಾಡುತ್ತೇವೆ. ನೀವು ಟ್ರ್ಯಾಕ್ಟರ್‌ಗಳನ್ನು ತಡೆದು ನಮ್ಮ 3 ಗಂಟೆಯ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಬೇಡಿ. ಒಂದು ವೇಳೆ ಹಾಗೆ ಮಾಡಿದರೆ ನಾವು ರಾಜ್ಯಾದ್ಯಂತ ದಿನವಿಡೀ ರಸ್ತೆಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಾವು ಬಾಂಬು – ಬಂದೂಕು ತೆಗೆದುಕೊಂಡು ಬೆಂಗಳೂರಿಗೆ ಬರುತ್ತಿಲ್ಲ. ಬದಲಿಗೆ ಶಾಂತಿಯುತವಾಗಿ ಹೋರಾಟ ಮಾಡಲು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮೂರು ಕರಾಳ ಕಾನೂನುಗಳು ರದ್ದಾಗಬೇಕೆಂಬುದು ನಮ್ಮ ಒತ್ತಾಯ ಎಂದು ನಾಗೇಂದ್ರರವರು ಹೇಳಿದ್ದಾರೆ.

ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಲ್ಕೂ ದಿಕ್ಕುಗಳಿಂದ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದು, ಸುಮಾರು 5000 ವಾಹನಗಳು ಬೆಂಗಳೂರಿನಲ್ಲಿ ಪರೇಡ್ ನಡೆಸಲಿವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...