Homeಮುಖಪುಟರಂಜನ್ ಗೊಗೊಯ್‌ಗೆ 'ಅತ್ಯುನ್ನತ ನಾಗರಿಕ ಪ್ರಶಸ್ತಿ': 'ರಾಮ ಮಂದಿರ' ಸ್ಥಾಪನೆಯಾಗಿದ್ದರೆ.....

ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

- Advertisement -
- Advertisement -

ರಾಮಮಂದಿರ ಉದ್ಘಾಟನೆ ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿದೆ. ಇದೇ ವೇಳೆ ಅಯೋಧ್ಯೆ ಬಾಬರಿ ಮಸೀದಿ-ರಾಮಮಂದಿರದ ದಶಕಗಳ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡಿದ್ದ ಭಾರತದ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಸಭಾ ಸಂಸದ ರಂಜನ್ ಗೊಗೊಯ್ ಅವರನ್ನು ಅಸ್ಸಾಂನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಂಜನ್‌ ಗೊಗಯ್‌ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ದಶಕಗಳಷ್ಟು ಹಳೆಯದಾದ ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಬಗ್ಗೆ ತೀರ್ಪು ನೀಡಿತ್ತು. ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರಿದ್ದರು. ಪೀಠವು ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು.

ರಾಮ ಅಲ್ಲಿಯೇ ಜನಿಸಿದ ಎಂಬುದು ಹಿಂದುಗಳ ನಂಬಿಕೆ. ನಂಬಿಕೆಯು ವೈಯಕ್ತಿಕ ವಿಷಯ, ಹಿಂದೂಗಳು ಅಯೋಧ್ಯೆಯನ್ನು ರಾಮನ ಜನ್ಮಸ್ಥಾನ ಅಂತ ನಂಬಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಧಾರ್ಮಿಕ ಭಾವನೆಗಳಿವೆ. ಮುಸ್ಲಿಮರು ಆ ಜಾಗ ಬಾಬ್ರಿ ಮಸೀದಿಯದ್ದು ಅಂತಾರೆ. ಆದರೆ ರಾಮ ಅಲ್ಲಿ ಜನಿಸಿದ್ದ ಎಂಬ ಹಿಂದುಗಳ ನಂಬಿಕೆ ವಿವಾದರಹಿತವಾದದ್ದು. ಆದರೆ ಈ ಭೂಮಿ ಯಾರಿಗೆ ಸೇರಿದ್ದೆಂಬ ವ್ಯಾಜ್ಯವು ಸಂಪೂರ್ಣವಾಗಿ ಕಾನೂನಿಗೆ ಸಂಬಂಧಿಸಿದ್ದು. ಮಸೀದಿಗೆ ಹಾನಿ ಮಾಡಿದ್ದು, ಕಾನೂನು ಕೈಗೆ ತೆಗೆದುಕೊಂಡಿದ್ದೂ ಸರಿಯಲ್ಲ. ವಿವಾದಿತ ಜಾಗವನ್ನು ಮೂರು ಭಾಗ ಮಾಡಿದ್ದಕ್ಕೆ ಎಲ್ಲೆಡೆಯಿಂದಲೂ ವಿರೋಧವಿದೆ ಎಂದು ನ್ಯಾಯಪೀಠ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಸುಪ್ರೀಂಕೋರ್ಟ್‌ನ ಈ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಅಯೋಧ್ಯೆ ತೀರ್ಪು ನೀಡಲು ಗೊಗೊಯ್ ತನ್ನನ್ನು ತಾನು ಮಾರಾಟ ಮಾಡಿಕೊಂಡಿದ್ದಾರೆ ಎಂದು ಖ್ಯಾತ ಉರ್ದು ಕವಿ ಮುನವ್ವರ್ ರಾಣಾ ಅವರು ಟೀಕಿಸಿದ್ದರು. ಭಾರತದ ನ್ಯಾಯಾಂಗದ ವ್ಯವಸ್ಥೆ ಬಗ್ಗೆ ಮುಸ್ಲಿಮರ ನಂಬಿಕೆಗೆ ಧಕ್ಕೆ ಉಂಟಾಗಿತ್ತು.

ಬಾಬರಿ ಮಸೀದಿ- ರಾಮಮಂದಿರ ಭೂ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡಿದ್ದ ಪೀಠದಲ್ಲಿದ್ದ ಎಲ್ಲಾ ಜಡ್ಜ್‌ಗಳು ಕೂಡ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅಂದಿನ ಸಿಜೆಐ ರಂಜನ್‌ ಗೊಗಯ್‌ ಅವರನ್ನು ರಾಜ್ಯಸಭೆಗೆ ಬಿಜೆಪಿ ನಾಮನಿರ್ದೇಶನ ಮಾಡಿತ್ತು. ಎಸ್‌ಎ ಬೋಬ್ಡೆ ಅವರು ನವೆಂಬರ್ 2019ರಿಂದ ಏಪ್ರಿಲ್ 2021ರ ನಡುವೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಡಿವೈ ಚಂದ್ರಚೂಡ್ ಅವರು ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಪೀಠದಲ್ಲಿದ್ದ ಇನ್ನೋರ್ವ ಜಡ್ಜ್‌ ಅಬ್ದುಲ್ ನಜೀರ್‌ ಅವರು ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದಾರೆ.

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ರಂಜನ್‌ ಗೊಗಯ್‌ ಅವರಿಗೆ  ‘ಅಸ್ಸಾಂ ಬೈಭವ’ ಪ್ರಶಸ್ತಿಯನ್ನು ಫೆಬ್ರವರಿ 10ರಂದು ನೀಡಲಾಗುವುದು ಎಂದು ಘೋಷಿಸಿದ್ದಾರೆ. ‘ಅಸ್ಸಾಂ ಬೈಭವ’ ಪ್ರಶಸ್ತಿಯನ್ನು ಮೂರು ವರ್ಷಗಳಿಂದ ನೀಡಲಾಗುತ್ತಿದೆ. ಮೊದಲ ವರ್ಷದಲ್ಲಿ ನಾವು ಅಸ್ಸಾಂ ಬೈಭವ ಪ್ರಶಸ್ತಿಯನ್ನು ರತನ್ ಟಾಟಾ ಅವರಿಗೆ ನೀಡಿದ್ದೇವೆ. ಕಳೆದ ವರ್ಷ ನಾವು ತಪನ್ ಸೈಕಿಯಾ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದೇವೆ. ಈ ಬಾರಿ ಅಸ್ಸಾಂ ಸರ್ಕಾರವು ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ‘ಅಸ್ಸಾಂ ಬೈಭವ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಿಮಂತ ಬಿಸ್ವ ಶರ್ಮಾ ಅವರು ಹೇಳಿದ್ದಾರೆ.

ರಂಜನ್‌ ಗೊಗಯ್‌ ‘ಭಾರತದ ಮುಖ್ಯ ನ್ಯಾಯಮೂರ್ತಿಯಂತಹ’ ಅತ್ಯುನ್ನತ ಹುದ್ದೆ ಅಲಂಕರಿಸಿದ ಈಶಾನ್ಯದ ಮೊದಲ ನ್ಯಾಯಾಧೀಶರಾಗಿದ್ದಾರೆ. ಈ ಪ್ರಶಸ್ತಿಯು ನ್ಯಾಯದ ವಿತರಣೆಯನ್ನು ವಿಸ್ತರಿಸಲು ಮತ್ತು ನಮ್ಮ ನ್ಯಾಯಶಾಸ್ತ್ರವನ್ನು ಶ್ರೀಮಂತಗೊಳಿಸಲು ಅವರ ಅಸಾಧಾರಣ ಪ್ರಯತ್ನಗಳನ್ನು ಗುರುತಿಸಿ ನೀಡಲಾಗುತ್ತಿದೆ.  ಇಂದು ಮತ್ತೊಮ್ಮೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪಿಸಿದ್ದರೆ…., ಅದರ ಸ್ವಲ್ಪ ಕ್ರೆಡಿಟ್ ಅಸ್ಸಾಂಗೆ ಸಲ್ಲುತ್ತದೆ ಎಂದು ಕೂಡ ಶರ್ಮಾ ಹೇಳಿರುವ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ರಂಜನ್ ಗೊಗೊಯ್ ರಾಜ್ಯಸಭೆಗೆ ನಾಮನಿರ್ದೇಶನ:

ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾದ ಕೆಲವೇ ದಿನಗಳಲ್ಲಿ ಗೊಗೊಯ್ ಅವರನ್ನು ಬಿಜೆಪಿ ರಾಜ್ಯಸಭೆಗೆ ನಾಮನಿರ್ದೇಶಗೊಳಿಸಿತ್ತು. ಈ ವೇಳೆ ಗೊಗೊಯ್ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿತ್ತು. ಯೋಗೇಂದ್ರ ಯಾದವ್ ಅವರು, “ತಮ್ಮ ಮಾಲೀಕರಿಂದ ರಂಜನ್ ಗೋಗಾಯಿ ಅವರಿಗೆ ಯಾಕೆ ರಾಜ್ಯಸಭಾ ಸದಸ್ಯತ್ವದ ಭಕ್ಷೀಸು ಸಂದಾಯವಾಗಿದೆ ಎಂಬುದನ್ನು ತಿಳಿಯಬೇಕಾದರೆ ಇದನ್ನು ಗಮನಿಸಿ.. ತೀರಾ ನಾಚಿಕೆಗೇಡು” ಎಂದು ‘ದ ಕ್ಯಾರವಾನ್’ ಪತ್ರಿಕೆಯಲ್ಲಿ ಗೋಗಾಯಿ ಸರ್ಕಾರದ ಪರ ನೀಡಿದ್ದ ತೀರ್ಪುಗಳ ಪಟ್ಟಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

ಸ್ವತಃ ಸುಪ್ರೀಂಕೋರ್ಟ್ ವಕೀಲರಾಗಿದ್ದ ಕಪಿಲ್ ಸಿಬಲ್ ಕೂಡ ಈ ಬಗ್ಗೆ  ಪ್ರತಿಕ್ರಿಯಿಸಿ, ನ್ಯಾ. ಎಚ್ ಆರ್ ಖನ್ನಾ ಅವರನ್ನು, ಅವರ ವ್ಯಕ್ತಿತ್ವದ ಬದ್ಧತೆ, ಸರ್ಕಾರದ ವಿರುದ್ಧದ ಗಟ್ಟಿ ನಿಲುವು, ನ್ಯಾಯವನ್ನು ಎತ್ತಿಹಿಡಿದ ದೃಢತೆಗಾಗಿ ನೆನಪಿಸಿಕೊಳ್ಳುತ್ತೇವೆ. ಹಾಗೇ ರಂಜನ್ ಗೋಗಾಯಿ ಅವರನ್ನು ಸರ್ಕಾರದಿಂದ ಬಚಾವಾದದ್ದಕ್ಕಾಗಿ, ಆ ಕೃತಜ್ಞತೆಗಾಗಿ ಸರ್ಕಾರದ ಸೇವೆಗೆ ನಿಂತದ್ದಕ್ಕಾಗಿ, ತನ್ನ ವೈಯಕ್ತಿಕ ಮತ್ತು ಒಟ್ಟಾರೆ ನ್ಯಾಯಾಂಗದ ಘನತೆಯ ವಿಷಯದಲ್ಲಿ ರಾಜಿ ಮಾಡಿಕೊಂಡದ್ದಕ್ಕಾಗಿ ನಾವು ರಾಜ್ಯಸಭಾ ಸದಸ್ಯತ್ವವನ್ನು ಬುಟ್ಟಿಗೆ ಹಾಕಿಕೊಂಡರು ಎಂದು ಸ್ಮರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ರಂಜನ್ ಗೊಗೊಯ್ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಕಿರುಕುಳ ಆರೋಪ:

ರಂಜನ್ ಗೊಗೊಯ್ ಅವರು ಭಾರತದ ಸುಪ್ರೀಂಕೋರ್ಟ್‌ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಸಿಜೆಐ ಆಗಿರುವ ವೇಳೆ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿತ್ತು. ಸುಪ್ರೀಂಕೋರ್ಟ್‌ ಇತಿಹಾಸದಲ್ಲೇ ಸಿಜೆಐ ಓರ್ವರ ವಿರುದ್ಧ ಇದೇ ಮೊದಲ ಬಾರಿಗೆ ಲೈಂಗಿಕ ಕಿರುಕುಳದಂತಹ ಆರೋಪ ಕೇಳಿ ಬಂದಿತ್ತು.

ನ್ಯಾಯಾಲಯದ ಮಾಜಿ ಉದ್ಯೋಗಿ ತಾನು ಬರೆದ ಅಫಿಡವಿಟ್‌ ಪ್ರತಿಗಳನ್ನು ಸುಪ್ರೀಂಕೋರ್ಟ್‌ನ 22 ನ್ಯಾಯಮೂರ್ತಿಗಳ ನಿವಾಸಕ್ಕೆ ತಲುಪಿಸಿದ್ದರು. ಇದರಲ್ಲಿ ಆಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್‌ ಗೊಗೋಯಿ ತಮಗೆ ಲೈಂಗಿಕ ಶೋ‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಷಣೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದರು. 2018ರ ಅಕ್ಟೋಬರ್‌ನಲ್ಲಿ ಗೊಗೋಯಿ ಸಿಜೆಐ ಆಗಿ ನೇಮಕಗೊಂಡ ಕೆಲವೇ ದಿನಗಳ ಬಳಿಕ ನಡೆದ ಘಟನೆಗಳು ಇವಾಗಿತ್ತು. ಮುಖ್ಯ ನ್ಯಾಯಮೂರ್ತಿಗಳ ಲೈಂಗಿಕ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಕೆಲಸ ಕಳೆದುಕೊಳ್ಳುವುದು, ಬಂಧನ, ಪೊಲೀಸರಿಂದ ಹಿಂಸೆಯಂತಹ ನಿರಂತರ ಕಿರುಕುಳದ ಘಟನೆಗಳನ್ನು ನನ್ನ ಕುಟುಂಬ ಅನುಭವಿಸಬೇಕಾಯಿತು ಎಂದು ಆಕೆ ದೂರಿದ್ದರು. ಸಿಜೆಐ ತಮ್ಮ ಸ್ಥಾನವನ್ನು, ಕಚೇರಿ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಮತ್ತು ಪೋಲಿಸರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅವರು ಆರೋಪಿಸಿದ್ದರು. 2019ರಲ್ಲಿ ದಾಖಲಿಸಲಾಗಿದ್ದ ಈ ಕುರಿತ ಸುಮೋಟೋ ಕೇಸ್‌ 2021ರಲ್ಲಿ  ಮುಕ್ತಾಯಗೊಂಡಿತ್ತು.

ಇದನ್ನು ಓದಿ: ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...