Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...