Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...