Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...