Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...