Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...