Homeಮುಖಪುಟಶಾರುಖ್‌ BJP ಸೇರಿದರೆ ಡ್ರಗ್ಸ್‌ ಸಕ್ಕರೆ ಪುಡಿಯಾಗಿ ಮಾರ್ಪಾಡಾಗುತ್ತದೆ: ಮಹಾರಾಷ್ಟ್ರ ಸಚಿವ

ಶಾರುಖ್‌ BJP ಸೇರಿದರೆ ಡ್ರಗ್ಸ್‌ ಸಕ್ಕರೆ ಪುಡಿಯಾಗಿ ಮಾರ್ಪಾಡಾಗುತ್ತದೆ: ಮಹಾರಾಷ್ಟ್ರ ಸಚಿವ

- Advertisement -
- Advertisement -

ಡ್ರಗ್ಸ್‌ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್‌ ಖಾನ್ ಅವರ ಪುತ್ರ ಆರ್ಯನ್ ಖಾನ್‌ ಅವರು ಬಂಧನದಲ್ಲಿದ್ದು, ಇದುವರೆಗೂ ಜಾಮೀನು ಸಿಕ್ಕಿಲ್ಲ. ಒಂದು ವೇಳೆ ಶಾರುಖ್‌ ಖಾನ್‌ ಬಿಜೆಪಿಗೆ ಸೇರ್ಪಡೆಯಾದರೆ, ಅದೇ ಡ್ರಗ್ಸ್‌ ಸಕ್ಕರೆ ಪೌಡರ್‌ ಆಗಿ ಮಾರ್ಪಡುತ್ತದೆ ಎಂದು ಮಹಾರಾಷ್ಟ್ರ ಸಚಿವ ಛಗನ್ ಭುಜ್ಬಾಲ್ ಅವರು ವ್ಯಂಗ್ಯವಾಡಿದ್ದಾರೆ.

ತನ್ನ ಮಗನಿಗೆ ಜಾಮೀನು ಪಡೆಯಲು ಶಾರುಖ್ ಖಾನ್ ಹರಸಾಹಸ ಪಡುತ್ತಿದ್ದು, ಈಗಾಗಲೇ ಎರಡು ಬಾರಿ ಆರ್ಯನ್‌‌ ಜಾಮೀನು ಅರ್ಜಿಯನ್ನು ಕೊರ್ಟ್ ತಿರಸ್ಕರಿಸಿದೆ.

ಇದನ್ನೂ ಓದಿ: ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

“ಗುಜರಾತ್‌ನ ಮಂದ್ರಾ ಬಂದರಿನಲ್ಲಿ ವಶಪಡಿಸಿಕೊಂಡ 3,000 ಕೆಜಿ ಹೆರಾಯಿನ್ ಪ್ರಕರಣದ ತನಿಖೆ ನಡೆಸುವ ಬದಲು, ಎನ್‌ಸಿಬಿ ಶಾರೂಖ್ ಖಾನ್‌ರನ್ನು ಬೇಟೆಯಾಡುತ್ತಿದೆ. ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆ ಪುಡಿಯಾಗಿ ಮಾರ್ಪಾಡಾಗುತ್ತದೆ” ಎಂದು ಎನ್‌ಸಿಪಿ ನಾಯಕರಾದ ಭುಜ್ಬಾಲ್‌ ವ್ಯಂಗ್ಯವಾಡಿದ್ದಾರೆ.

ಡ್ರಗ್ಸ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಖಾನ್‌ರನ್ನು ಮುಂಬೈ ಹಡಗಿನಿಂದ ಡ್ರಗ್ಸ್‌ ಪ್ರಕರಣದಲ್ಲಿ ಅಕ್ಟೋಬರ್‌ 03 ರಂದು ಎನ್‌ಸಿಬಿ ಬಂಧಿಸಿತ್ತು. ಅರ್ಯನ್‌ಗೆ ಅಕ್ಟೋಬರ್‌ 20ರಂದು ಜಾಮೀನು ಸಿಗದೆ ಮತ್ತೆ ಜೈಲುಪಾಲಾಗಿದ್ದಾರೆ. ಅಲ್ಲದೆ, ಕಳೆದ ಮೂರು ದಿನಗಳ ಹಿಂದೆ ಎನ್‌ಸಿಬಿ ತಂಡ ಶಾರುಖ್‌ ಖಾನ್ ಅವರ ಮನೆಗೂ ದಾಳಿ ಮಾಡಿತ್ತು.

ಆರ್ಯನ್ ಖಾನ್ ಪ್ರೈಮಾ ಫೇಸಿಯ ವಾಟ್ಸಾಪ್ ಚಾಟ್‌ಗಳಲ್ಲಿ ಆತ “ಅಕ್ರಮ ಮಾದಕವಸ್ತು ಚಟುವಟಿಕೆಗಳಲ್ಲಿ ತೊಡಗಿದ್ದಾನೆ” ಮತ್ತು ಆತ ಮಾದಕವಸ್ತು ಮಾರಾಟಗಾರರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂದು ವಿಶೇಷ ನ್ಯಾಯಾಲಯವು ಗಮನಿಸಿದ್ದು, ಆತನಿಗೆ ಜಾಮೀನು ನೀಡಲು ನಿರಾಕರಿಸಿದೆ. ಹೀಗಾಗಿ, ಶಾರುಖ್‌ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ, ಅಕ್ಟೋಬರ್‌‌ 26ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಸಿಎಂ ‘ಬುರುಡೆ ಬೊಮ್ಮಾಯಿ’ ಬಿಜೆಪಿ ‘ಬಂಡಲ್’: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...