Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...