Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...