Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...