Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...