Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...