Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...