Homeಕರ್ನಾಟಕಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ, ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂತಹ ಕತೆಗಳನ್ನು ಕಟ್ಟಿ ಬಿಡುತ್ತಾರೆ ಹುಷಾರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ತುಮಕೂರಿನಲ್ಲಿ ಶನಿವಾರ (ಏ.19) ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ, ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ, ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದರು.

ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು ಎಂದು ಹೇಳಿದರು.

ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ? ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ. ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಬೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ, ಈಗ ಶಿಕ್ಷಣ ಸಿಕ್ಕಿದೆ, ನಿಮ್ಮ ನಿಮ್ಮ‌ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದು ಸಿಎಂ ಪುನರುಚ್ಚರಿಸಿದರು.

ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...