Homeಕರ್ನಾಟಕಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ, ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂತಹ ಕತೆಗಳನ್ನು ಕಟ್ಟಿ ಬಿಡುತ್ತಾರೆ ಹುಷಾರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ತುಮಕೂರಿನಲ್ಲಿ ಶನಿವಾರ (ಏ.19) ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ, ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ, ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದರು.

ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು ಎಂದು ಹೇಳಿದರು.

ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ? ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ. ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಬೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ, ಈಗ ಶಿಕ್ಷಣ ಸಿಕ್ಕಿದೆ, ನಿಮ್ಮ ನಿಮ್ಮ‌ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದು ಸಿಎಂ ಪುನರುಚ್ಚರಿಸಿದರು.

ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...