Homeಕರ್ನಾಟಕವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ...?

ವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ…?

- Advertisement -
- Advertisement -

ಕಳೆದ ವಾರ ಬಳ್ಳಾರಿಯ ಸಿಎಎ ಪರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಇದ್ದಕ್ಕಿದ್ದಂತೆಯೇ ಮುಸ್ಲಿಮರ ವಿರುದ್ಧ ಉಗ್ರ ಭಾಷಣ ಬಿಗಿದಿದ್ದರು. ಖಡ್ಗ ಮಚ್ಚು ತಂದು ಕೊಚ್ಚಿ ಹಾಕ್ತೀವಿ ಎನ್ನುವವರೆಗೂ ತನ್ನ ನಾಲಗೆ ಹರಿಯಬಿಟ್ಟಿದ್ದರು. ಆತನ ಮಾತುಗಳಿಂದ ಸ್ವತಃ ಬಿಜೆಪಿಗರೆ ಆಶ್ರ‍್ಯಚಕಿತರಾಗಿದ್ದರು. ಆತ ಮುಂಚೆ ಹಾಗಿರಲಿಲ್ಲ, ಈಗೇಕೆ ರೊಚ್ಚಿಗೆದ್ದರು ಎಂದು ಹುಡುಕಿ ಹೊರಟರೆ ಅದರ ಮೂಲ ವಿಜಯನಗರ ಜಿಲ್ಲೆಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಹೌದು, ಹೊಸಪೇಟೆಯ ಶಾಸಕ ಆನಂದ್ ಸಿಂಗ್ ವಿಜಯನಗರ ಜಿಲ್ಲೆ ಆಗಬೇಕೆಂದು ಯಡಿಯೂರಪ್ಪ ಬಳಿ ಮನವಿ ಮಾಡಿದಾಕ್ಷಣ ಯಡಿಯೂರಪ್ಪ ಒಪ್ಪಿ ಸಹಿ ಹಾಕಿದ್ದು ನಿಮಗೆ ಗೊತ್ತೆ ಇದೆ. ಉಜ್ಜಯಿನಿ ಸ್ವಾಮೀಜಿಗಳು, ಸಂಗನಬಸವ ಸ್ವಾಮೀಜಿಗಳ ಒತ್ತಡವೂ ಇದಕ್ಕೆ ಕಾರಣವಾಗಿತ್ತು. ಆದರೆ ಏನು ಕಾರಣವೋ ಯಾವ ಒತ್ತಡವೋ ಆ ಆದೇಶ ವಾಪಸ್ ಹಿಂದಕ್ಕೆ ತೆಗೆದುಕೊಂಡುಬಿಟ್ಟರು. ಅದೇ ಸಮಯದಲ್ಲಿ ಒಬ್ಬರಿಗೊಬ್ಬರು ಆಗದವರಂತಿದ್ದ ಸೋಮಶೇಖರ್‌ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆ ಆಗಬಾರದು ಎಂದು ಒಟ್ಟಿಗೆ ದನಿಯೆತ್ತಿದ್ದರು. ಹಾಗೇನಾದರೂ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಒಂದುವೇಳೆ ವಿಜಯನಗರ ಜಿಲ್ಲೆ ರಚನೆಯಾದಲ್ಲಿ ಅದು ಈ ರೆಡ್ಡಿಗಳ ಅಸ್ತಿತ್ವವನ್ನು ಅಲ್ಲಾಡಿಸುವುದರಲ್ಲಿ ಅನುಮಾನವೇ ಇಲ್ಲ. ಆಗ ಸಂಡೂರು, ಬಳ್ಳಾರಿ, ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿದುಕೊಳ್ಳುತ್ತವೆ. ಬಳ್ಳಾರಿಗೆ ಹತ್ತಿರವಿದ್ದರೂ ಸಹ ಕೂಡ್ಲಿಗಿ, ಕಂಪ್ಲಿ ತಾಲ್ಲೂಕುಗಳು ಸಹ ವಿಜಯನಗರಕ್ಕೆ ಸೇರಲು ಒತ್ತಾಯಿಸುತ್ತಿವೆ. ಪ್ರತ್ಯೇಕ ಜಿಲ್ಲೆಯಾದರೆ ರೆಡ್ಡಿಗಳ ಆಟಾಟೋಪ ಇರುವುದಿಲ್ಲ, ಡ್ಯಾಂ ಇದೆ, ಪ್ರವಾಸೋದ್ಯಮವಿದೆ, ಹಾಗಾಗಿ ಅದು ಅಭಿವೃದ್ಧಿಯಾಗುತ್ತದೆ ಎಂಬುದು ಅಲ್ಲಿಯ ಜನರ ಅಭಿಮತ.

ವಿಜಯನಗರ ಜಿಲ್ಲೆ ಆದಲ್ಲಿ ಈಗಾಗಲೇ ಲೂಟಿಯಾಗಿರುವ ಬಳ್ಳಾರಿ ಜಿಲ್ಲೆ ಮತ್ತಷ್ಟು ಸೊರಗುತ್ತದೆ. ಇತ್ತೀಚೆಗೆ ರೆಡ್ಡಿಗಳು ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಜನರ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಬೆಳೆದಿದೆ ಎನ್ನಲಾಗುತ್ತಿದೆ. ಆನಂದ್ ಸಿಂಗ್ ಮಂತ್ರಿಯಾಗುವುದರ ಜೊತೆಗೆ ವಿಜಯನಗರ ಜಿಲ್ಲೆಯ ಹರಿಕಾರನಾಗಿ ಮೆರೆಯುತ್ತಾರೆ, ಆಗ ಬಳ್ಳಾರಿಯಲ್ಲಿ ತಮ್ಮ ಹಿಡಿತ ಕಡಿಮೆಯಾಗುತ್ತದೆ ಎಂಬುದು ರೆಡ್ಡಿ ಸಹೋದರರ ಚಿಂತೆ. ಈಗಾಗಲೇ ಜನರಿಂದ ದೂರವಾಗುತ್ತಿರುವ ರೆಡ್ಡಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಶತಾಯಗತಾಯ ವಿಜಯನಗರ ಜಿಲ್ಲೆ ತಡೆಯಬೇಕು ಮತ್ತು ಮತ್ತೆ ಚಾಲ್ತಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸಿಎಎ ಅವರಿಗೆ ವರವಾಗಿ ಬಂದಿದೆ.

ಹೌದು ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯಾಗುತ್ತೆ ಅಂತ ಪುಕಾರು ಎಬ್ಬಿತ್ತು. ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ತನಗೂ ಜನರ ಬೆಂಬಲವಿದೆ ಎಂದು ಘೋಷಿಸುವುದು ರೆಡ್ಡಿಗಳಿಗೆ ಅನಿವಾರ್ಯವಾಗಿತ್ತು. ಹಾಗಾಗಿಯೇ ಸೋಮಶೇಖರ್ ರೆಡ್ಡಿ ಉಗ್ರ ಭಾಷಣ ಮಾಡಿದ್ದಾರೆ. ಆಶ್ರ‍್ಯ ಎಂದರೆ ಅಷ್ಟು ದಿನ ಜನಾರ್ದನ ರೆಡ್ಡಿ ಬಲಗೈ ಬಂಟನಂತಿದ್ದ ಮೆಹಫೂಜ್ ಅಲಿಖಾನ್ ಸೋಮಶೇಖರ್ ರೆಡ್ಡಿಗಳ ವಿರುದ್ಧವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾನೆ. ಅಂದರೆ ಆ ವಿಚಾರವನ್ನು ಚಾಲ್ತಿಯಲ್ಲಿಡುವುದು ಅವರಿಗೆ ಅನಿವಾರ್ಯವಾಗಿದೆ.

ಇದರಿಂದ ಏಕಕಾಲದಲ್ಲಿ ಪ್ರಚಾರವೂ, ಆರ್‌ಎಸ್‌ಎಸ್ ಬೆಂಬಲವೂ ರೆಡ್ಡಿಗಳಿಗೆ ಸಿಕ್ಕಿದೆ. ಅವರ ಹೇಳಿಕೆ ಕೇಳಿದೊಡನೆಯು ಸ್ಥಳೀಯ ಆರ್‌ಎಸ್‌ಎಸ್ ಮುಖಂಡರು ಸೋಮಶೇಖರ್ ರೆಡ್ಡಿ ಪರವಾಗಿ ನಿಂತಿದ್ದಾರೆ. ಬಳ್ಳಾರಿಯಲ್ಲಿ ಹೆಚ್ಚು ಕೋಮುಗಲಭೆಗಳು ನಡೆದ ಉದಾಹರಣೆಗಳಿಲ್ಲ. ಮುಂದೇನಾದರೂ ಆದಲ್ಲಿ ಅದು ಬಿಜೆಪಿಗೆ ವರವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. ಆದರೂ ಸೋಮಶೇಖರ್ ರೆಡ್ಡಿ ಇಷ್ಟಕ್ಕೆ ಸುಮ್ಮನಿದ್ದಿಲ್ಲ. ನಿನ್ನೆ ರೆಡ್ಡಿಗೆ ಸವಾಲು ಹಾಕಿ ಬಳ್ಳಾರಿಗೆ ಬಂದಿದ್ದ ಜಮೀರ್ ಅಹ್ಮದ್ ಖಾನ್ ಬಂಧನ, ಬಿಡುಗಡೆಯ ಬಳಿಕ ಆತ ನನಗೆ ಹೆದರಿಕೊಂಡು ವಾಪಸ್ ಹೋಗಿದ್ದಾನೆ ಎಂದು ತನ್ನ ವರಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಇನ್ನು ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ತೋರಬಹುದಿದ್ದ ಕಾಂಗ್ರೆಸ್ ಸಂಪೂರ್ಣ ಮಲಗಿದೆ. ಜಮೀರ್ ಆಹ್ಮದ್ ಬರಬಾರದು ಎಂದು ಅರ್ಜಿ ಕೊಟ್ಟ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಸೋಮಶೇಖರ್ ರೆಡ್ಡಿಯ ವಿರುದ್ಧ ಒಂದೂ ಹೇಳಿಕೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಮಾರಾಟವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೆಲ್ಲದರ ಲಾಭ ಪಡೆದುಕೊಳ್ಳಲು ರೆಡ್ಡಿ ಸಹೋದರರು ಮುಂದಾಗಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಬಿ.ಶ್ರೀರಾಮುಲುಗೆ ಇದೆಲ್ಲಾ ಬೇಕಾಗಿಲ್ಲ. ಅದಕ್ಕಾಗಿಯೇ ಸೋಮಶೇಖರ್ ರೆಡ್ಡಿ ಹೇಳಿಕೆ ಕೊಟ್ಟ ಮರುದಿನವೇ ಮುಸ್ಲಿಂ ಮದುವೆಯೊಂದರಲ್ಲಿ ರೆಡ್ಡಿ ಜೊತೆ ಭಾಗವಹಿಸಿದ್ದಲ್ಲದೇ ಮುಸ್ಲಿಂ ಮುಖಂಡರ ಮುಂದೆ ಅಂಗಲಾಚಿ ಮಾತನಾಡಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ, ನಾವೆಲ್ಲರೂ ಅಣ್ಣತಮ್ಮಂದಿರಂತೆ ಇದ್ದೀವಿ, ಇದನ್ನೆಲ್ಲ ಮನಸ್ಸಿಗೆ ಹಾಕಿಕೊಳ್ಳಬೇಡಿ ಎಂದು ಮನವಿ ಮಾಡುವ ವಿಡಿಯೋ ವೈರಲ್ ಆಗಿತ್ತು.

ಶ್ರೀರಾಮುಲು ಮುಸ್ಲಿಮರ ವಿರುದ್ಧ ನೇರವಾಗಿ ಮಾತಾಡುವುದಿಲ್ಲ. ಆದರೆ ಸೋಮಶೇಖರ್ ರೆಡ್ಡಿಯನ್ನು ಬಿಟ್ಟುಕೊಡುವಂತಿಲ್ಲ. ಏಕೆಂದರೆ ಬಳ್ಳಾರಿಯ ಹಿಡಿತ ತಪ್ಪುವುದು ಅವರಿಗೂ ಬೇಕಿಲ್ಲ. ತಮ್ಮ ಕುಟುಂಬದ ಅಸ್ತಿತ್ವ ಕಾಪಾಡಲು ಸಿಎಎ ಅವರಿಗೆ ಒಂದು ನೆಪವಾಗಿ ಸಿಕ್ಕಿದೆಯಷ್ಟೇ.

ಒಟ್ಟಿನಲ್ಲಿ ಸೋಮಶೇಖರ್ ರೆಡ್ಡಿ ಪ್ಲಾನ್ ವರ್ಕೌಟ್ ಆದಂತೆ ಕಾಣುತ್ತಿದೆ. ಒಂದು ಕಡೆ ರಾಜ್ಯಮಟ್ಟದ ಪ್ರಚಾರ, ಇನ್ನೊಂದು ಕಡೆ ಆರ್‌ಎಸ್‌ಎಸ್ ಬೆಂಬಲ.. ಇನ್ನು ವಿಜಯನಗರ ಜಿಲ್ಲೆಯ ಸೊಲ್ಲೆ ಕೇಳಿಬಂದಿಲ್ಲ ಎಂದಮೇಲೆ ಅವರಿಗೂ ಅದೇ ಬೇಕಿತ್ತು ತಾನೇ?

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...