Homeಕರ್ನಾಟಕವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ...?

ವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ…?

- Advertisement -
- Advertisement -

ಕಳೆದ ವಾರ ಬಳ್ಳಾರಿಯ ಸಿಎಎ ಪರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಇದ್ದಕ್ಕಿದ್ದಂತೆಯೇ ಮುಸ್ಲಿಮರ ವಿರುದ್ಧ ಉಗ್ರ ಭಾಷಣ ಬಿಗಿದಿದ್ದರು. ಖಡ್ಗ ಮಚ್ಚು ತಂದು ಕೊಚ್ಚಿ ಹಾಕ್ತೀವಿ ಎನ್ನುವವರೆಗೂ ತನ್ನ ನಾಲಗೆ ಹರಿಯಬಿಟ್ಟಿದ್ದರು. ಆತನ ಮಾತುಗಳಿಂದ ಸ್ವತಃ ಬಿಜೆಪಿಗರೆ ಆಶ್ರ‍್ಯಚಕಿತರಾಗಿದ್ದರು. ಆತ ಮುಂಚೆ ಹಾಗಿರಲಿಲ್ಲ, ಈಗೇಕೆ ರೊಚ್ಚಿಗೆದ್ದರು ಎಂದು ಹುಡುಕಿ ಹೊರಟರೆ ಅದರ ಮೂಲ ವಿಜಯನಗರ ಜಿಲ್ಲೆಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಹೌದು, ಹೊಸಪೇಟೆಯ ಶಾಸಕ ಆನಂದ್ ಸಿಂಗ್ ವಿಜಯನಗರ ಜಿಲ್ಲೆ ಆಗಬೇಕೆಂದು ಯಡಿಯೂರಪ್ಪ ಬಳಿ ಮನವಿ ಮಾಡಿದಾಕ್ಷಣ ಯಡಿಯೂರಪ್ಪ ಒಪ್ಪಿ ಸಹಿ ಹಾಕಿದ್ದು ನಿಮಗೆ ಗೊತ್ತೆ ಇದೆ. ಉಜ್ಜಯಿನಿ ಸ್ವಾಮೀಜಿಗಳು, ಸಂಗನಬಸವ ಸ್ವಾಮೀಜಿಗಳ ಒತ್ತಡವೂ ಇದಕ್ಕೆ ಕಾರಣವಾಗಿತ್ತು. ಆದರೆ ಏನು ಕಾರಣವೋ ಯಾವ ಒತ್ತಡವೋ ಆ ಆದೇಶ ವಾಪಸ್ ಹಿಂದಕ್ಕೆ ತೆಗೆದುಕೊಂಡುಬಿಟ್ಟರು. ಅದೇ ಸಮಯದಲ್ಲಿ ಒಬ್ಬರಿಗೊಬ್ಬರು ಆಗದವರಂತಿದ್ದ ಸೋಮಶೇಖರ್‌ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆ ಆಗಬಾರದು ಎಂದು ಒಟ್ಟಿಗೆ ದನಿಯೆತ್ತಿದ್ದರು. ಹಾಗೇನಾದರೂ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಒಂದುವೇಳೆ ವಿಜಯನಗರ ಜಿಲ್ಲೆ ರಚನೆಯಾದಲ್ಲಿ ಅದು ಈ ರೆಡ್ಡಿಗಳ ಅಸ್ತಿತ್ವವನ್ನು ಅಲ್ಲಾಡಿಸುವುದರಲ್ಲಿ ಅನುಮಾನವೇ ಇಲ್ಲ. ಆಗ ಸಂಡೂರು, ಬಳ್ಳಾರಿ, ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿದುಕೊಳ್ಳುತ್ತವೆ. ಬಳ್ಳಾರಿಗೆ ಹತ್ತಿರವಿದ್ದರೂ ಸಹ ಕೂಡ್ಲಿಗಿ, ಕಂಪ್ಲಿ ತಾಲ್ಲೂಕುಗಳು ಸಹ ವಿಜಯನಗರಕ್ಕೆ ಸೇರಲು ಒತ್ತಾಯಿಸುತ್ತಿವೆ. ಪ್ರತ್ಯೇಕ ಜಿಲ್ಲೆಯಾದರೆ ರೆಡ್ಡಿಗಳ ಆಟಾಟೋಪ ಇರುವುದಿಲ್ಲ, ಡ್ಯಾಂ ಇದೆ, ಪ್ರವಾಸೋದ್ಯಮವಿದೆ, ಹಾಗಾಗಿ ಅದು ಅಭಿವೃದ್ಧಿಯಾಗುತ್ತದೆ ಎಂಬುದು ಅಲ್ಲಿಯ ಜನರ ಅಭಿಮತ.

ವಿಜಯನಗರ ಜಿಲ್ಲೆ ಆದಲ್ಲಿ ಈಗಾಗಲೇ ಲೂಟಿಯಾಗಿರುವ ಬಳ್ಳಾರಿ ಜಿಲ್ಲೆ ಮತ್ತಷ್ಟು ಸೊರಗುತ್ತದೆ. ಇತ್ತೀಚೆಗೆ ರೆಡ್ಡಿಗಳು ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಜನರ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಬೆಳೆದಿದೆ ಎನ್ನಲಾಗುತ್ತಿದೆ. ಆನಂದ್ ಸಿಂಗ್ ಮಂತ್ರಿಯಾಗುವುದರ ಜೊತೆಗೆ ವಿಜಯನಗರ ಜಿಲ್ಲೆಯ ಹರಿಕಾರನಾಗಿ ಮೆರೆಯುತ್ತಾರೆ, ಆಗ ಬಳ್ಳಾರಿಯಲ್ಲಿ ತಮ್ಮ ಹಿಡಿತ ಕಡಿಮೆಯಾಗುತ್ತದೆ ಎಂಬುದು ರೆಡ್ಡಿ ಸಹೋದರರ ಚಿಂತೆ. ಈಗಾಗಲೇ ಜನರಿಂದ ದೂರವಾಗುತ್ತಿರುವ ರೆಡ್ಡಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಶತಾಯಗತಾಯ ವಿಜಯನಗರ ಜಿಲ್ಲೆ ತಡೆಯಬೇಕು ಮತ್ತು ಮತ್ತೆ ಚಾಲ್ತಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸಿಎಎ ಅವರಿಗೆ ವರವಾಗಿ ಬಂದಿದೆ.

ಹೌದು ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯಾಗುತ್ತೆ ಅಂತ ಪುಕಾರು ಎಬ್ಬಿತ್ತು. ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ತನಗೂ ಜನರ ಬೆಂಬಲವಿದೆ ಎಂದು ಘೋಷಿಸುವುದು ರೆಡ್ಡಿಗಳಿಗೆ ಅನಿವಾರ್ಯವಾಗಿತ್ತು. ಹಾಗಾಗಿಯೇ ಸೋಮಶೇಖರ್ ರೆಡ್ಡಿ ಉಗ್ರ ಭಾಷಣ ಮಾಡಿದ್ದಾರೆ. ಆಶ್ರ‍್ಯ ಎಂದರೆ ಅಷ್ಟು ದಿನ ಜನಾರ್ದನ ರೆಡ್ಡಿ ಬಲಗೈ ಬಂಟನಂತಿದ್ದ ಮೆಹಫೂಜ್ ಅಲಿಖಾನ್ ಸೋಮಶೇಖರ್ ರೆಡ್ಡಿಗಳ ವಿರುದ್ಧವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾನೆ. ಅಂದರೆ ಆ ವಿಚಾರವನ್ನು ಚಾಲ್ತಿಯಲ್ಲಿಡುವುದು ಅವರಿಗೆ ಅನಿವಾರ್ಯವಾಗಿದೆ.

ಇದರಿಂದ ಏಕಕಾಲದಲ್ಲಿ ಪ್ರಚಾರವೂ, ಆರ್‌ಎಸ್‌ಎಸ್ ಬೆಂಬಲವೂ ರೆಡ್ಡಿಗಳಿಗೆ ಸಿಕ್ಕಿದೆ. ಅವರ ಹೇಳಿಕೆ ಕೇಳಿದೊಡನೆಯು ಸ್ಥಳೀಯ ಆರ್‌ಎಸ್‌ಎಸ್ ಮುಖಂಡರು ಸೋಮಶೇಖರ್ ರೆಡ್ಡಿ ಪರವಾಗಿ ನಿಂತಿದ್ದಾರೆ. ಬಳ್ಳಾರಿಯಲ್ಲಿ ಹೆಚ್ಚು ಕೋಮುಗಲಭೆಗಳು ನಡೆದ ಉದಾಹರಣೆಗಳಿಲ್ಲ. ಮುಂದೇನಾದರೂ ಆದಲ್ಲಿ ಅದು ಬಿಜೆಪಿಗೆ ವರವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. ಆದರೂ ಸೋಮಶೇಖರ್ ರೆಡ್ಡಿ ಇಷ್ಟಕ್ಕೆ ಸುಮ್ಮನಿದ್ದಿಲ್ಲ. ನಿನ್ನೆ ರೆಡ್ಡಿಗೆ ಸವಾಲು ಹಾಕಿ ಬಳ್ಳಾರಿಗೆ ಬಂದಿದ್ದ ಜಮೀರ್ ಅಹ್ಮದ್ ಖಾನ್ ಬಂಧನ, ಬಿಡುಗಡೆಯ ಬಳಿಕ ಆತ ನನಗೆ ಹೆದರಿಕೊಂಡು ವಾಪಸ್ ಹೋಗಿದ್ದಾನೆ ಎಂದು ತನ್ನ ವರಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಇನ್ನು ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ತೋರಬಹುದಿದ್ದ ಕಾಂಗ್ರೆಸ್ ಸಂಪೂರ್ಣ ಮಲಗಿದೆ. ಜಮೀರ್ ಆಹ್ಮದ್ ಬರಬಾರದು ಎಂದು ಅರ್ಜಿ ಕೊಟ್ಟ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಸೋಮಶೇಖರ್ ರೆಡ್ಡಿಯ ವಿರುದ್ಧ ಒಂದೂ ಹೇಳಿಕೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಮಾರಾಟವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೆಲ್ಲದರ ಲಾಭ ಪಡೆದುಕೊಳ್ಳಲು ರೆಡ್ಡಿ ಸಹೋದರರು ಮುಂದಾಗಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಬಿ.ಶ್ರೀರಾಮುಲುಗೆ ಇದೆಲ್ಲಾ ಬೇಕಾಗಿಲ್ಲ. ಅದಕ್ಕಾಗಿಯೇ ಸೋಮಶೇಖರ್ ರೆಡ್ಡಿ ಹೇಳಿಕೆ ಕೊಟ್ಟ ಮರುದಿನವೇ ಮುಸ್ಲಿಂ ಮದುವೆಯೊಂದರಲ್ಲಿ ರೆಡ್ಡಿ ಜೊತೆ ಭಾಗವಹಿಸಿದ್ದಲ್ಲದೇ ಮುಸ್ಲಿಂ ಮುಖಂಡರ ಮುಂದೆ ಅಂಗಲಾಚಿ ಮಾತನಾಡಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ, ನಾವೆಲ್ಲರೂ ಅಣ್ಣತಮ್ಮಂದಿರಂತೆ ಇದ್ದೀವಿ, ಇದನ್ನೆಲ್ಲ ಮನಸ್ಸಿಗೆ ಹಾಕಿಕೊಳ್ಳಬೇಡಿ ಎಂದು ಮನವಿ ಮಾಡುವ ವಿಡಿಯೋ ವೈರಲ್ ಆಗಿತ್ತು.

ಶ್ರೀರಾಮುಲು ಮುಸ್ಲಿಮರ ವಿರುದ್ಧ ನೇರವಾಗಿ ಮಾತಾಡುವುದಿಲ್ಲ. ಆದರೆ ಸೋಮಶೇಖರ್ ರೆಡ್ಡಿಯನ್ನು ಬಿಟ್ಟುಕೊಡುವಂತಿಲ್ಲ. ಏಕೆಂದರೆ ಬಳ್ಳಾರಿಯ ಹಿಡಿತ ತಪ್ಪುವುದು ಅವರಿಗೂ ಬೇಕಿಲ್ಲ. ತಮ್ಮ ಕುಟುಂಬದ ಅಸ್ತಿತ್ವ ಕಾಪಾಡಲು ಸಿಎಎ ಅವರಿಗೆ ಒಂದು ನೆಪವಾಗಿ ಸಿಕ್ಕಿದೆಯಷ್ಟೇ.

ಒಟ್ಟಿನಲ್ಲಿ ಸೋಮಶೇಖರ್ ರೆಡ್ಡಿ ಪ್ಲಾನ್ ವರ್ಕೌಟ್ ಆದಂತೆ ಕಾಣುತ್ತಿದೆ. ಒಂದು ಕಡೆ ರಾಜ್ಯಮಟ್ಟದ ಪ್ರಚಾರ, ಇನ್ನೊಂದು ಕಡೆ ಆರ್‌ಎಸ್‌ಎಸ್ ಬೆಂಬಲ.. ಇನ್ನು ವಿಜಯನಗರ ಜಿಲ್ಲೆಯ ಸೊಲ್ಲೆ ಕೇಳಿಬಂದಿಲ್ಲ ಎಂದಮೇಲೆ ಅವರಿಗೂ ಅದೇ ಬೇಕಿತ್ತು ತಾನೇ?

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...