Homeಕರ್ನಾಟಕವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ...?

ವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ…?

- Advertisement -
- Advertisement -

ಕಳೆದ ವಾರ ಬಳ್ಳಾರಿಯ ಸಿಎಎ ಪರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಇದ್ದಕ್ಕಿದ್ದಂತೆಯೇ ಮುಸ್ಲಿಮರ ವಿರುದ್ಧ ಉಗ್ರ ಭಾಷಣ ಬಿಗಿದಿದ್ದರು. ಖಡ್ಗ ಮಚ್ಚು ತಂದು ಕೊಚ್ಚಿ ಹಾಕ್ತೀವಿ ಎನ್ನುವವರೆಗೂ ತನ್ನ ನಾಲಗೆ ಹರಿಯಬಿಟ್ಟಿದ್ದರು. ಆತನ ಮಾತುಗಳಿಂದ ಸ್ವತಃ ಬಿಜೆಪಿಗರೆ ಆಶ್ರ‍್ಯಚಕಿತರಾಗಿದ್ದರು. ಆತ ಮುಂಚೆ ಹಾಗಿರಲಿಲ್ಲ, ಈಗೇಕೆ ರೊಚ್ಚಿಗೆದ್ದರು ಎಂದು ಹುಡುಕಿ ಹೊರಟರೆ ಅದರ ಮೂಲ ವಿಜಯನಗರ ಜಿಲ್ಲೆಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಹೌದು, ಹೊಸಪೇಟೆಯ ಶಾಸಕ ಆನಂದ್ ಸಿಂಗ್ ವಿಜಯನಗರ ಜಿಲ್ಲೆ ಆಗಬೇಕೆಂದು ಯಡಿಯೂರಪ್ಪ ಬಳಿ ಮನವಿ ಮಾಡಿದಾಕ್ಷಣ ಯಡಿಯೂರಪ್ಪ ಒಪ್ಪಿ ಸಹಿ ಹಾಕಿದ್ದು ನಿಮಗೆ ಗೊತ್ತೆ ಇದೆ. ಉಜ್ಜಯಿನಿ ಸ್ವಾಮೀಜಿಗಳು, ಸಂಗನಬಸವ ಸ್ವಾಮೀಜಿಗಳ ಒತ್ತಡವೂ ಇದಕ್ಕೆ ಕಾರಣವಾಗಿತ್ತು. ಆದರೆ ಏನು ಕಾರಣವೋ ಯಾವ ಒತ್ತಡವೋ ಆ ಆದೇಶ ವಾಪಸ್ ಹಿಂದಕ್ಕೆ ತೆಗೆದುಕೊಂಡುಬಿಟ್ಟರು. ಅದೇ ಸಮಯದಲ್ಲಿ ಒಬ್ಬರಿಗೊಬ್ಬರು ಆಗದವರಂತಿದ್ದ ಸೋಮಶೇಖರ್‌ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆ ಆಗಬಾರದು ಎಂದು ಒಟ್ಟಿಗೆ ದನಿಯೆತ್ತಿದ್ದರು. ಹಾಗೇನಾದರೂ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಒಂದುವೇಳೆ ವಿಜಯನಗರ ಜಿಲ್ಲೆ ರಚನೆಯಾದಲ್ಲಿ ಅದು ಈ ರೆಡ್ಡಿಗಳ ಅಸ್ತಿತ್ವವನ್ನು ಅಲ್ಲಾಡಿಸುವುದರಲ್ಲಿ ಅನುಮಾನವೇ ಇಲ್ಲ. ಆಗ ಸಂಡೂರು, ಬಳ್ಳಾರಿ, ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿದುಕೊಳ್ಳುತ್ತವೆ. ಬಳ್ಳಾರಿಗೆ ಹತ್ತಿರವಿದ್ದರೂ ಸಹ ಕೂಡ್ಲಿಗಿ, ಕಂಪ್ಲಿ ತಾಲ್ಲೂಕುಗಳು ಸಹ ವಿಜಯನಗರಕ್ಕೆ ಸೇರಲು ಒತ್ತಾಯಿಸುತ್ತಿವೆ. ಪ್ರತ್ಯೇಕ ಜಿಲ್ಲೆಯಾದರೆ ರೆಡ್ಡಿಗಳ ಆಟಾಟೋಪ ಇರುವುದಿಲ್ಲ, ಡ್ಯಾಂ ಇದೆ, ಪ್ರವಾಸೋದ್ಯಮವಿದೆ, ಹಾಗಾಗಿ ಅದು ಅಭಿವೃದ್ಧಿಯಾಗುತ್ತದೆ ಎಂಬುದು ಅಲ್ಲಿಯ ಜನರ ಅಭಿಮತ.

ವಿಜಯನಗರ ಜಿಲ್ಲೆ ಆದಲ್ಲಿ ಈಗಾಗಲೇ ಲೂಟಿಯಾಗಿರುವ ಬಳ್ಳಾರಿ ಜಿಲ್ಲೆ ಮತ್ತಷ್ಟು ಸೊರಗುತ್ತದೆ. ಇತ್ತೀಚೆಗೆ ರೆಡ್ಡಿಗಳು ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಜನರ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಬೆಳೆದಿದೆ ಎನ್ನಲಾಗುತ್ತಿದೆ. ಆನಂದ್ ಸಿಂಗ್ ಮಂತ್ರಿಯಾಗುವುದರ ಜೊತೆಗೆ ವಿಜಯನಗರ ಜಿಲ್ಲೆಯ ಹರಿಕಾರನಾಗಿ ಮೆರೆಯುತ್ತಾರೆ, ಆಗ ಬಳ್ಳಾರಿಯಲ್ಲಿ ತಮ್ಮ ಹಿಡಿತ ಕಡಿಮೆಯಾಗುತ್ತದೆ ಎಂಬುದು ರೆಡ್ಡಿ ಸಹೋದರರ ಚಿಂತೆ. ಈಗಾಗಲೇ ಜನರಿಂದ ದೂರವಾಗುತ್ತಿರುವ ರೆಡ್ಡಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಶತಾಯಗತಾಯ ವಿಜಯನಗರ ಜಿಲ್ಲೆ ತಡೆಯಬೇಕು ಮತ್ತು ಮತ್ತೆ ಚಾಲ್ತಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸಿಎಎ ಅವರಿಗೆ ವರವಾಗಿ ಬಂದಿದೆ.

ಹೌದು ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯಾಗುತ್ತೆ ಅಂತ ಪುಕಾರು ಎಬ್ಬಿತ್ತು. ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ತನಗೂ ಜನರ ಬೆಂಬಲವಿದೆ ಎಂದು ಘೋಷಿಸುವುದು ರೆಡ್ಡಿಗಳಿಗೆ ಅನಿವಾರ್ಯವಾಗಿತ್ತು. ಹಾಗಾಗಿಯೇ ಸೋಮಶೇಖರ್ ರೆಡ್ಡಿ ಉಗ್ರ ಭಾಷಣ ಮಾಡಿದ್ದಾರೆ. ಆಶ್ರ‍್ಯ ಎಂದರೆ ಅಷ್ಟು ದಿನ ಜನಾರ್ದನ ರೆಡ್ಡಿ ಬಲಗೈ ಬಂಟನಂತಿದ್ದ ಮೆಹಫೂಜ್ ಅಲಿಖಾನ್ ಸೋಮಶೇಖರ್ ರೆಡ್ಡಿಗಳ ವಿರುದ್ಧವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾನೆ. ಅಂದರೆ ಆ ವಿಚಾರವನ್ನು ಚಾಲ್ತಿಯಲ್ಲಿಡುವುದು ಅವರಿಗೆ ಅನಿವಾರ್ಯವಾಗಿದೆ.

ಇದರಿಂದ ಏಕಕಾಲದಲ್ಲಿ ಪ್ರಚಾರವೂ, ಆರ್‌ಎಸ್‌ಎಸ್ ಬೆಂಬಲವೂ ರೆಡ್ಡಿಗಳಿಗೆ ಸಿಕ್ಕಿದೆ. ಅವರ ಹೇಳಿಕೆ ಕೇಳಿದೊಡನೆಯು ಸ್ಥಳೀಯ ಆರ್‌ಎಸ್‌ಎಸ್ ಮುಖಂಡರು ಸೋಮಶೇಖರ್ ರೆಡ್ಡಿ ಪರವಾಗಿ ನಿಂತಿದ್ದಾರೆ. ಬಳ್ಳಾರಿಯಲ್ಲಿ ಹೆಚ್ಚು ಕೋಮುಗಲಭೆಗಳು ನಡೆದ ಉದಾಹರಣೆಗಳಿಲ್ಲ. ಮುಂದೇನಾದರೂ ಆದಲ್ಲಿ ಅದು ಬಿಜೆಪಿಗೆ ವರವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. ಆದರೂ ಸೋಮಶೇಖರ್ ರೆಡ್ಡಿ ಇಷ್ಟಕ್ಕೆ ಸುಮ್ಮನಿದ್ದಿಲ್ಲ. ನಿನ್ನೆ ರೆಡ್ಡಿಗೆ ಸವಾಲು ಹಾಕಿ ಬಳ್ಳಾರಿಗೆ ಬಂದಿದ್ದ ಜಮೀರ್ ಅಹ್ಮದ್ ಖಾನ್ ಬಂಧನ, ಬಿಡುಗಡೆಯ ಬಳಿಕ ಆತ ನನಗೆ ಹೆದರಿಕೊಂಡು ವಾಪಸ್ ಹೋಗಿದ್ದಾನೆ ಎಂದು ತನ್ನ ವರಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಇನ್ನು ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ತೋರಬಹುದಿದ್ದ ಕಾಂಗ್ರೆಸ್ ಸಂಪೂರ್ಣ ಮಲಗಿದೆ. ಜಮೀರ್ ಆಹ್ಮದ್ ಬರಬಾರದು ಎಂದು ಅರ್ಜಿ ಕೊಟ್ಟ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಸೋಮಶೇಖರ್ ರೆಡ್ಡಿಯ ವಿರುದ್ಧ ಒಂದೂ ಹೇಳಿಕೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಮಾರಾಟವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೆಲ್ಲದರ ಲಾಭ ಪಡೆದುಕೊಳ್ಳಲು ರೆಡ್ಡಿ ಸಹೋದರರು ಮುಂದಾಗಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಬಿ.ಶ್ರೀರಾಮುಲುಗೆ ಇದೆಲ್ಲಾ ಬೇಕಾಗಿಲ್ಲ. ಅದಕ್ಕಾಗಿಯೇ ಸೋಮಶೇಖರ್ ರೆಡ್ಡಿ ಹೇಳಿಕೆ ಕೊಟ್ಟ ಮರುದಿನವೇ ಮುಸ್ಲಿಂ ಮದುವೆಯೊಂದರಲ್ಲಿ ರೆಡ್ಡಿ ಜೊತೆ ಭಾಗವಹಿಸಿದ್ದಲ್ಲದೇ ಮುಸ್ಲಿಂ ಮುಖಂಡರ ಮುಂದೆ ಅಂಗಲಾಚಿ ಮಾತನಾಡಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ, ನಾವೆಲ್ಲರೂ ಅಣ್ಣತಮ್ಮಂದಿರಂತೆ ಇದ್ದೀವಿ, ಇದನ್ನೆಲ್ಲ ಮನಸ್ಸಿಗೆ ಹಾಕಿಕೊಳ್ಳಬೇಡಿ ಎಂದು ಮನವಿ ಮಾಡುವ ವಿಡಿಯೋ ವೈರಲ್ ಆಗಿತ್ತು.

ಶ್ರೀರಾಮುಲು ಮುಸ್ಲಿಮರ ವಿರುದ್ಧ ನೇರವಾಗಿ ಮಾತಾಡುವುದಿಲ್ಲ. ಆದರೆ ಸೋಮಶೇಖರ್ ರೆಡ್ಡಿಯನ್ನು ಬಿಟ್ಟುಕೊಡುವಂತಿಲ್ಲ. ಏಕೆಂದರೆ ಬಳ್ಳಾರಿಯ ಹಿಡಿತ ತಪ್ಪುವುದು ಅವರಿಗೂ ಬೇಕಿಲ್ಲ. ತಮ್ಮ ಕುಟುಂಬದ ಅಸ್ತಿತ್ವ ಕಾಪಾಡಲು ಸಿಎಎ ಅವರಿಗೆ ಒಂದು ನೆಪವಾಗಿ ಸಿಕ್ಕಿದೆಯಷ್ಟೇ.

ಒಟ್ಟಿನಲ್ಲಿ ಸೋಮಶೇಖರ್ ರೆಡ್ಡಿ ಪ್ಲಾನ್ ವರ್ಕೌಟ್ ಆದಂತೆ ಕಾಣುತ್ತಿದೆ. ಒಂದು ಕಡೆ ರಾಜ್ಯಮಟ್ಟದ ಪ್ರಚಾರ, ಇನ್ನೊಂದು ಕಡೆ ಆರ್‌ಎಸ್‌ಎಸ್ ಬೆಂಬಲ.. ಇನ್ನು ವಿಜಯನಗರ ಜಿಲ್ಲೆಯ ಸೊಲ್ಲೆ ಕೇಳಿಬಂದಿಲ್ಲ ಎಂದಮೇಲೆ ಅವರಿಗೂ ಅದೇ ಬೇಕಿತ್ತು ತಾನೇ?

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...