Homeಕರ್ನಾಟಕವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ...?

ವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ…?

- Advertisement -
- Advertisement -

ಕಳೆದ ವಾರ ಬಳ್ಳಾರಿಯ ಸಿಎಎ ಪರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಇದ್ದಕ್ಕಿದ್ದಂತೆಯೇ ಮುಸ್ಲಿಮರ ವಿರುದ್ಧ ಉಗ್ರ ಭಾಷಣ ಬಿಗಿದಿದ್ದರು. ಖಡ್ಗ ಮಚ್ಚು ತಂದು ಕೊಚ್ಚಿ ಹಾಕ್ತೀವಿ ಎನ್ನುವವರೆಗೂ ತನ್ನ ನಾಲಗೆ ಹರಿಯಬಿಟ್ಟಿದ್ದರು. ಆತನ ಮಾತುಗಳಿಂದ ಸ್ವತಃ ಬಿಜೆಪಿಗರೆ ಆಶ್ರ‍್ಯಚಕಿತರಾಗಿದ್ದರು. ಆತ ಮುಂಚೆ ಹಾಗಿರಲಿಲ್ಲ, ಈಗೇಕೆ ರೊಚ್ಚಿಗೆದ್ದರು ಎಂದು ಹುಡುಕಿ ಹೊರಟರೆ ಅದರ ಮೂಲ ವಿಜಯನಗರ ಜಿಲ್ಲೆಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಹೌದು, ಹೊಸಪೇಟೆಯ ಶಾಸಕ ಆನಂದ್ ಸಿಂಗ್ ವಿಜಯನಗರ ಜಿಲ್ಲೆ ಆಗಬೇಕೆಂದು ಯಡಿಯೂರಪ್ಪ ಬಳಿ ಮನವಿ ಮಾಡಿದಾಕ್ಷಣ ಯಡಿಯೂರಪ್ಪ ಒಪ್ಪಿ ಸಹಿ ಹಾಕಿದ್ದು ನಿಮಗೆ ಗೊತ್ತೆ ಇದೆ. ಉಜ್ಜಯಿನಿ ಸ್ವಾಮೀಜಿಗಳು, ಸಂಗನಬಸವ ಸ್ವಾಮೀಜಿಗಳ ಒತ್ತಡವೂ ಇದಕ್ಕೆ ಕಾರಣವಾಗಿತ್ತು. ಆದರೆ ಏನು ಕಾರಣವೋ ಯಾವ ಒತ್ತಡವೋ ಆ ಆದೇಶ ವಾಪಸ್ ಹಿಂದಕ್ಕೆ ತೆಗೆದುಕೊಂಡುಬಿಟ್ಟರು. ಅದೇ ಸಮಯದಲ್ಲಿ ಒಬ್ಬರಿಗೊಬ್ಬರು ಆಗದವರಂತಿದ್ದ ಸೋಮಶೇಖರ್‌ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆ ಆಗಬಾರದು ಎಂದು ಒಟ್ಟಿಗೆ ದನಿಯೆತ್ತಿದ್ದರು. ಹಾಗೇನಾದರೂ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಒಂದುವೇಳೆ ವಿಜಯನಗರ ಜಿಲ್ಲೆ ರಚನೆಯಾದಲ್ಲಿ ಅದು ಈ ರೆಡ್ಡಿಗಳ ಅಸ್ತಿತ್ವವನ್ನು ಅಲ್ಲಾಡಿಸುವುದರಲ್ಲಿ ಅನುಮಾನವೇ ಇಲ್ಲ. ಆಗ ಸಂಡೂರು, ಬಳ್ಳಾರಿ, ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿದುಕೊಳ್ಳುತ್ತವೆ. ಬಳ್ಳಾರಿಗೆ ಹತ್ತಿರವಿದ್ದರೂ ಸಹ ಕೂಡ್ಲಿಗಿ, ಕಂಪ್ಲಿ ತಾಲ್ಲೂಕುಗಳು ಸಹ ವಿಜಯನಗರಕ್ಕೆ ಸೇರಲು ಒತ್ತಾಯಿಸುತ್ತಿವೆ. ಪ್ರತ್ಯೇಕ ಜಿಲ್ಲೆಯಾದರೆ ರೆಡ್ಡಿಗಳ ಆಟಾಟೋಪ ಇರುವುದಿಲ್ಲ, ಡ್ಯಾಂ ಇದೆ, ಪ್ರವಾಸೋದ್ಯಮವಿದೆ, ಹಾಗಾಗಿ ಅದು ಅಭಿವೃದ್ಧಿಯಾಗುತ್ತದೆ ಎಂಬುದು ಅಲ್ಲಿಯ ಜನರ ಅಭಿಮತ.

ವಿಜಯನಗರ ಜಿಲ್ಲೆ ಆದಲ್ಲಿ ಈಗಾಗಲೇ ಲೂಟಿಯಾಗಿರುವ ಬಳ್ಳಾರಿ ಜಿಲ್ಲೆ ಮತ್ತಷ್ಟು ಸೊರಗುತ್ತದೆ. ಇತ್ತೀಚೆಗೆ ರೆಡ್ಡಿಗಳು ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಜನರ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಬೆಳೆದಿದೆ ಎನ್ನಲಾಗುತ್ತಿದೆ. ಆನಂದ್ ಸಿಂಗ್ ಮಂತ್ರಿಯಾಗುವುದರ ಜೊತೆಗೆ ವಿಜಯನಗರ ಜಿಲ್ಲೆಯ ಹರಿಕಾರನಾಗಿ ಮೆರೆಯುತ್ತಾರೆ, ಆಗ ಬಳ್ಳಾರಿಯಲ್ಲಿ ತಮ್ಮ ಹಿಡಿತ ಕಡಿಮೆಯಾಗುತ್ತದೆ ಎಂಬುದು ರೆಡ್ಡಿ ಸಹೋದರರ ಚಿಂತೆ. ಈಗಾಗಲೇ ಜನರಿಂದ ದೂರವಾಗುತ್ತಿರುವ ರೆಡ್ಡಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಶತಾಯಗತಾಯ ವಿಜಯನಗರ ಜಿಲ್ಲೆ ತಡೆಯಬೇಕು ಮತ್ತು ಮತ್ತೆ ಚಾಲ್ತಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸಿಎಎ ಅವರಿಗೆ ವರವಾಗಿ ಬಂದಿದೆ.

ಹೌದು ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯಾಗುತ್ತೆ ಅಂತ ಪುಕಾರು ಎಬ್ಬಿತ್ತು. ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ತನಗೂ ಜನರ ಬೆಂಬಲವಿದೆ ಎಂದು ಘೋಷಿಸುವುದು ರೆಡ್ಡಿಗಳಿಗೆ ಅನಿವಾರ್ಯವಾಗಿತ್ತು. ಹಾಗಾಗಿಯೇ ಸೋಮಶೇಖರ್ ರೆಡ್ಡಿ ಉಗ್ರ ಭಾಷಣ ಮಾಡಿದ್ದಾರೆ. ಆಶ್ರ‍್ಯ ಎಂದರೆ ಅಷ್ಟು ದಿನ ಜನಾರ್ದನ ರೆಡ್ಡಿ ಬಲಗೈ ಬಂಟನಂತಿದ್ದ ಮೆಹಫೂಜ್ ಅಲಿಖಾನ್ ಸೋಮಶೇಖರ್ ರೆಡ್ಡಿಗಳ ವಿರುದ್ಧವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾನೆ. ಅಂದರೆ ಆ ವಿಚಾರವನ್ನು ಚಾಲ್ತಿಯಲ್ಲಿಡುವುದು ಅವರಿಗೆ ಅನಿವಾರ್ಯವಾಗಿದೆ.

ಇದರಿಂದ ಏಕಕಾಲದಲ್ಲಿ ಪ್ರಚಾರವೂ, ಆರ್‌ಎಸ್‌ಎಸ್ ಬೆಂಬಲವೂ ರೆಡ್ಡಿಗಳಿಗೆ ಸಿಕ್ಕಿದೆ. ಅವರ ಹೇಳಿಕೆ ಕೇಳಿದೊಡನೆಯು ಸ್ಥಳೀಯ ಆರ್‌ಎಸ್‌ಎಸ್ ಮುಖಂಡರು ಸೋಮಶೇಖರ್ ರೆಡ್ಡಿ ಪರವಾಗಿ ನಿಂತಿದ್ದಾರೆ. ಬಳ್ಳಾರಿಯಲ್ಲಿ ಹೆಚ್ಚು ಕೋಮುಗಲಭೆಗಳು ನಡೆದ ಉದಾಹರಣೆಗಳಿಲ್ಲ. ಮುಂದೇನಾದರೂ ಆದಲ್ಲಿ ಅದು ಬಿಜೆಪಿಗೆ ವರವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. ಆದರೂ ಸೋಮಶೇಖರ್ ರೆಡ್ಡಿ ಇಷ್ಟಕ್ಕೆ ಸುಮ್ಮನಿದ್ದಿಲ್ಲ. ನಿನ್ನೆ ರೆಡ್ಡಿಗೆ ಸವಾಲು ಹಾಕಿ ಬಳ್ಳಾರಿಗೆ ಬಂದಿದ್ದ ಜಮೀರ್ ಅಹ್ಮದ್ ಖಾನ್ ಬಂಧನ, ಬಿಡುಗಡೆಯ ಬಳಿಕ ಆತ ನನಗೆ ಹೆದರಿಕೊಂಡು ವಾಪಸ್ ಹೋಗಿದ್ದಾನೆ ಎಂದು ತನ್ನ ವರಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಇನ್ನು ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ತೋರಬಹುದಿದ್ದ ಕಾಂಗ್ರೆಸ್ ಸಂಪೂರ್ಣ ಮಲಗಿದೆ. ಜಮೀರ್ ಆಹ್ಮದ್ ಬರಬಾರದು ಎಂದು ಅರ್ಜಿ ಕೊಟ್ಟ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಸೋಮಶೇಖರ್ ರೆಡ್ಡಿಯ ವಿರುದ್ಧ ಒಂದೂ ಹೇಳಿಕೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಮಾರಾಟವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೆಲ್ಲದರ ಲಾಭ ಪಡೆದುಕೊಳ್ಳಲು ರೆಡ್ಡಿ ಸಹೋದರರು ಮುಂದಾಗಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಬಿ.ಶ್ರೀರಾಮುಲುಗೆ ಇದೆಲ್ಲಾ ಬೇಕಾಗಿಲ್ಲ. ಅದಕ್ಕಾಗಿಯೇ ಸೋಮಶೇಖರ್ ರೆಡ್ಡಿ ಹೇಳಿಕೆ ಕೊಟ್ಟ ಮರುದಿನವೇ ಮುಸ್ಲಿಂ ಮದುವೆಯೊಂದರಲ್ಲಿ ರೆಡ್ಡಿ ಜೊತೆ ಭಾಗವಹಿಸಿದ್ದಲ್ಲದೇ ಮುಸ್ಲಿಂ ಮುಖಂಡರ ಮುಂದೆ ಅಂಗಲಾಚಿ ಮಾತನಾಡಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ, ನಾವೆಲ್ಲರೂ ಅಣ್ಣತಮ್ಮಂದಿರಂತೆ ಇದ್ದೀವಿ, ಇದನ್ನೆಲ್ಲ ಮನಸ್ಸಿಗೆ ಹಾಕಿಕೊಳ್ಳಬೇಡಿ ಎಂದು ಮನವಿ ಮಾಡುವ ವಿಡಿಯೋ ವೈರಲ್ ಆಗಿತ್ತು.

ಶ್ರೀರಾಮುಲು ಮುಸ್ಲಿಮರ ವಿರುದ್ಧ ನೇರವಾಗಿ ಮಾತಾಡುವುದಿಲ್ಲ. ಆದರೆ ಸೋಮಶೇಖರ್ ರೆಡ್ಡಿಯನ್ನು ಬಿಟ್ಟುಕೊಡುವಂತಿಲ್ಲ. ಏಕೆಂದರೆ ಬಳ್ಳಾರಿಯ ಹಿಡಿತ ತಪ್ಪುವುದು ಅವರಿಗೂ ಬೇಕಿಲ್ಲ. ತಮ್ಮ ಕುಟುಂಬದ ಅಸ್ತಿತ್ವ ಕಾಪಾಡಲು ಸಿಎಎ ಅವರಿಗೆ ಒಂದು ನೆಪವಾಗಿ ಸಿಕ್ಕಿದೆಯಷ್ಟೇ.

ಒಟ್ಟಿನಲ್ಲಿ ಸೋಮಶೇಖರ್ ರೆಡ್ಡಿ ಪ್ಲಾನ್ ವರ್ಕೌಟ್ ಆದಂತೆ ಕಾಣುತ್ತಿದೆ. ಒಂದು ಕಡೆ ರಾಜ್ಯಮಟ್ಟದ ಪ್ರಚಾರ, ಇನ್ನೊಂದು ಕಡೆ ಆರ್‌ಎಸ್‌ಎಸ್ ಬೆಂಬಲ.. ಇನ್ನು ವಿಜಯನಗರ ಜಿಲ್ಲೆಯ ಸೊಲ್ಲೆ ಕೇಳಿಬಂದಿಲ್ಲ ಎಂದಮೇಲೆ ಅವರಿಗೂ ಅದೇ ಬೇಕಿತ್ತು ತಾನೇ?

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...