ದೆಹಲಿಯ ನಿರ್ಭಯ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಹೇಳಿದ್ದಾರೆ.
ಮುಖೇಶ್ ಸಲ್ಲಿಸಿದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್ ಸಲ್ಲಿಸಿದ ಕುರೇಟೀವ್ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಯಾರನ್ನಾದರೂ ಗಲ್ಲಿಗೇರಿಸಲಾಗುವುದು ಎಂದರೆ ಇದಕ್ಕಿತ ಹೆಚ್ಚು ತುರ್ತು ಬೇರೆ ಇರುವುದಿಲ್ಲ ಎಂದು ಹೇಳಿದೆ.
ಫೆಬ್ರವರಿ 1ರಂದು ಯಾರನ್ನಾದರೂ ಗಲ್ಲಿಗೇರಿಸಬೇಕಾದರೆ ಅದು ಮೊದಲ ಆದ್ಯತೆಯ ವಿಷಯವಾಗಿದೆ ಮತ್ತು ಪೆಬ್ರವರಿ 1ರಂದು ಗಲ್ಲಿಗೇರಿಸಲು ನಿಗದಿಯಾಗಿರುವುದರಿಂದ ಉಲ್ಲೇಖಿತ ಅಧಿಕಾರಿಯನ್ನು ಸಂಪರ್ಕಿಸುವಂತೆ ಮುಖೇಶ್ ಅವರ ಸಲಹೆಗಾರರನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಮತ್ತು ಸೂರ್ಯಕಾಂತ್ರವರಿಗೆ ಕೋರ್ಟ್ ಸೂಚಿಸಿದೆ.
ಜನವರಿ 17ರಂದು ರಾಷ್ಟ್ರಪತಿಗಳು ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಕ್ಕೂ ಮೊದಲು ಅಕ್ಷಯ್ ಕುಮಾರ್ ಕುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ. ಈ ಅರ್ಜಿಯನ್ನು ತಿರಸ್ಕರಿಸಿತ್ತು.
ನಿರ್ಭಯ ಗ್ಯಾಂಗ್ ರೇಪ್ ಮತ್ತು ಕೊಲೆ ಅಪರಾಧಿಗಳಾದ ಪವನ್ ಕುಮಾರ್ ಮತ್ತು ವಿನಯ್ ಕುಮಾರ್ ಶರ್ಮಾ ಇದುವರೆಗೂ ಸುಪ್ರೀಂಕೋರ್ಟ್ ಗೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಿಲ್ಲ.