Homeಮುಖಪುಟ’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಸ್ಪಂದಿಸದ ಅಧಿಕಾರಿಗಳ ತಲೆಗೆ ಕೋಲಿನಿಂದ ಹೊಡೆಯಿರಿ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

’ಗಿರಿರಾಜ್ ಸಿಂಗ್ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ’ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರದ ತಮ್ಮ ಬೆಗುಸರಾಯ್ ಲೋಕಸಭಾ ಕ್ಷೇತ್ರದ ಜನರಿಗೆ, ’ನಿಮ್ಮ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ಬಿದಿರಿನ ಕೋಲುಗಳಿಂದ ಹೊಡೆಯಿರಿ’ ಎಂದು  ಸಲಹೆ ನೀಡಿದ್ದಾರೆ.

ಬೆಗುಸಾರಾಯ್‌ನಲ್ಲಿ ಕೃಷಿ ಸಂಸ್ಥೆ ಆಯೋಜಿಸಿದ್ದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು ಈ ಹೇಳಿಕೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, ಎಎನ್‌ಐ ಈ ಕುರಿತ ವಿಡಿಯೊವನ್ನು ಟ್ವೀಟ್ ಮಾಡಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಗಳನ್ನು ಹೊಂದಿರುವ ಸಚಿವರು, ’ಸಾಮಾನ್ಯ ನಾಗರಿಕರು ಆಗಾಗ್ಗೆ ನನಗೆ ದೂರುಗಳನ್ನು ನೀಡುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ದೂರುಗಳಿಗೆ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಜನಸಾಮಾನ್ಯರು ಆರೋಪಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

“ನಾನು ಜನರಿಗೆ  ಹೇಳುತ್ತೇನೆ, ಇಂತಹ ಸಣ್ಣ ವಿಷಯಗಳಿಗಾಗಿ ನೀವು ನನ್ನ ಬಳಿಗೆ ಏಕೆ ಬರುತ್ತೀರಿ? ಸಂಸದರು, ಶಾಸಕರು, ಗ್ರಾಮದ ಮುಖ್ಯಸ್ಥರು,  ಡಿಸಿಗಳು, ಉಪ ಡಿಸಿಗಳು, ಬಿಡಿಒಗಳ ಬಳಿಗೆ ಹೋಇ, ಇವರೆಲ್ಲರೂ ಜನರ ಸೇವೆ ಮಾಡುವ ಜವಾಬ್ದಾರಿಯಲ್ಲಿದ್ದಾರೆ. ಅವರು ನಿಮ್ಮ ಮಾತನ್ನು ಕೇಳದಿದ್ದರೆ, ಎರಡೂ ಕೈಗಳಿಂದ ಬಿದಿರಿನ ಕೋಲನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಬಲವಾದ ಏಟು ನೀಡಿ’ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

“ಅದು ಸಹ ಕೆಲಸ ಮಾಡದಿದ್ದರೆ, ಈ ಗಿರಿರಾಜ್ ಸಿಂಗ್ ನಿಮ್ಮ ಜೊತೆ ಬರುತ್ತಾನೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿದ್ದ ಜನರು ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ವೇದಿಕೆಯಲ್ಲಿದ್ದ  ಗಣ್ಯರು ತಮ್ಮ ಆಸನಗಳಲ್ಲಿ ಕುಳಿತು ಸುಮ್ಮನೇ ಗಿರಿರಾಜ್ ಸಿಂಗ್ ಮಾತುಗಳನ್ನು ಕೇಳುತ್ತಿದ್ದರು.

ಘಟನೆಗೆ ಪ್ರತಿಕ್ರಿಯಿಸಿರುವ ಬಿಹಾರ ಬಿಜೆಪಿ ಮುಖಂಡರೊಬ್ಬರು, “ಗಿರಿರಾಜ್ ಸಿಂಗ್ ಅವರು ಸಾರ್ವಜನಿಕ ಕೋಪಕ್ಕೆ ಸ್ಪಂದಿಸಬೇಕಾದ ಸಾಮೂಹಿಕ ನಾಯಕರಾಗಿದ್ದಾರೆ. ಅವರ ಹೇಳಿಕೆಯನ್ನು ನಾವು ಸಾಂಕೇತಿಕವಾಗಿ ತೆಗೆದುಕೊಳ್ಳಬೇಕು, ಅಕ್ಷರಶಃ ಅಲ್ಲ” ಎಂದು ಹೇಳಿದ್ದಾರೆ.

ಇಂತಹ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಗಿರಿರಾಜ್ ಸಿಂಗ್ ಹೆಸರು ಹಲವು ಬಾರಿ ಬಂದಿದ್ದು, ಈ ಹಿಂದೆ ಅವರು ಹಲವು ಸಲ ಕೋಮು ಪ್ರಚೋದನೆಯ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸಿದ್ದರು.


ಇದನ್ನೂ ಓದಿ: ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...