Homeಚಳವಳಿರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

’ಕೇಂದ್ರ ಸರ್ಕಾರ ಬೇಷರತ್ತಾದ ಮಾತುಕತೆಗೆ ರೈತರನ್ನು ಕರೆದು ಸಂವಾದ ನಡೆಸಿದರೆ ಸಮಸ್ಯೆಯನ್ನು ಒಂದು ನಿಮಿಷದಲ್ಲಿ ಪರಿಹರಿಸಬಹುದು’

- Advertisement -
- Advertisement -

ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ರಾಜಕೀಯ ಲಾಭಕ್ಕಾಗಿ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿಗೆ ಆಪ್‌ ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ತಿರುಗೇಟು ನೀಡಿದ್ದಾರೆ. “ಈ ಬಿಕ್ಕಟ್ಟಿನ ಸಮಯದಲ್ಲಿ ರೈತರ ಪರ ನಿಂತರೆ, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರೇ ಅದು ರಾಜಕೀಯ ಎನ್ನುವುದಾದರೇ..ಹೌದು ನಾವು ತಪ್ಪಿತಸ್ಥರೇ” ಎಂದು ಹೇಳಿದ್ದಾರೆ.

ರೈತರ ಮೇಲೆ ಬಿಜೆಪಿ ಆಡಳಿತದ ಹರಿಯಾಣ ಮತ್ತು ದೆಹಲಿಯಲ್ಲಿ ಪೊಲೀಸರು ನಡೆಸಿರುವ ದಾಳಿಯ ಕುರಿತು ಬಿಜೆಪಿ ಮೇಲೆ ರಾಘವ್ ಚಾಡ್ಡಾ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಮನಸ್ಸು ಮಾಡಿದರೇ, ಷರತ್ತುಬದ್ಧ ಮಾತುಕತೆಯನ್ನು ಬಿಟ್ಟು ಬೇಷರತ್ತಾದ ಮಾತುಕತೆಗೆ ರೈತರನ್ನು ಕರೆದು ಸಭೆ ನಡೆಸಿದರೆ ಸಮಸ್ಯೆಯನ್ನು ಒಂದು ನಿಮಿಷದಲ್ಲಿ ಪರಿಹರಿಸಬಹುದು ಎಂದಿದ್ದಾರೆ.

“ರೈತರು ಈಗ ಬಿಕ್ಕಟ್ಟಿನ ಸಮಯದಲ್ಲಿದ್ದಾರೆ. ಈ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ರಾಜಕೀಯವಾಗಿದ್ದರೆ, ನಾವು ಅದನ್ನು ಮಾಡುತ್ತಿದ್ದೇವೆ ಹಾಗಾಗಿ, ನಾವು ತಪ್ಪಿತಸ್ಥರೇ. ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರೆ ಅದು ರಾಜಕೀಯ ಎನ್ನುವುದಾದರೇ, ನಾವು ತಪ್ಪಿತಸ್ಥರೇ. ನಮ್ಮ ಹೃದಯವು ರೈತರಿಗಾಗಿ ಮಿಡಿಯುತ್ತದೆ. ನಾವು ಅವರೊಂದಿಗೆ ನಿಲ್ಲುತ್ತೇವೆ. ಇದು ರೈತರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ. ಇದನ್ನು ಬೆಂಬಲಿಸಲು ನಾವು ಇಲ್ಲಿದ್ದೇವೆ “ಎಂದು ಚಾಡ್ಡಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

“ಈ ವಿಷಯವನ್ನು ಕೇಂದ್ರ ಸರ್ಕಾರ ಒಂದು ನಿಮಿಷದಲ್ಲಿ ಪರಿಹರಿಸಬಹುದು. ಅವರು ಮಾಡಬೇಕಾಗಿರುವುದು ಫೋನ್ ತೆಗೆದುಕೊಂಡು ರೈತರಿಗೆ ಬೇಷರತ್ತಾದ ಸಂವಾದಕ್ಕೆ ಅವಕಾಶ ನೀಡುವುದು ಅಷ್ಟೇ. ದುರದೃಷ್ಟವಶಾತ್, ಸರ್ಕಾರ ಇದನ್ನು ಅಹಂಮ್ಮಿನ ಯುದ್ಧವಾಗಿ ಮಾಡಿ, ರೈತರೊಂದಿಗೆ ಮಾತನಾಡದೇ ರಹಸ್ಯ ಸಭೆಗಳನ್ನು ನಡೆಸುತ್ತಿದೆ. ಇದು ರೈತರ ಬಗ್ಗೆ ಮೋದಿ ಸರ್ಕಾರಕ್ಕೆ ಇರುವ ನಿರಾಸಕ್ತಿಯನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಅವರ ಸಂಪುಟ ಸಚಿವರೊಂದಿಗೆ, ಅಧಿಕಾರಿಗಳೊಂದಿಗೆ  ಅನೇಕ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿರುವ ಕುರಿತು ಆಪ್ ಪಕ್ಷ ಉಲ್ಲೇಖಿಸಿದೆ.

’ದೆಹಲಿ ಚಲೋ’ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ರೈತರಿಗೆ ಆಹಾರ, ನೀರು, ವಿದ್ಯುತ್ ವ್ಯವಸ್ಥೆ ಮಾಡಿದೆ.

ಬಿಜೆಪಿಯ ಐಟಿ ಸೇಟಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ದೆಹಲಿ ಸರ್ಕಾರವು ಈಗಾಗಲೇ ಮೊದಲು ಕೃಷಿ ಕಾನೂನುಗಳನ್ನು ಜಾರಿಗೊಳಿಸಿದೆ. ಈಗ ಕಾನೂನುಗಳನ್ನು ವಿರೋಧಿಸಲು ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಬಂದಿದ್ದು, ಅವರನ್ನು ಬೆಂಬಲಿಸುತ್ತಿದೆ. ಆಪ್ ಸರ್ಕಾರ ಎಂದಿಗೂ ರೈತರ ಪರ ಇರಲಿಲ್ಲ. ಇದು ಕೇವಲ ರಾಜಕೀಯ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...