Homeಚಳವಳಿರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

’ಕೇಂದ್ರ ಸರ್ಕಾರ ಬೇಷರತ್ತಾದ ಮಾತುಕತೆಗೆ ರೈತರನ್ನು ಕರೆದು ಸಂವಾದ ನಡೆಸಿದರೆ ಸಮಸ್ಯೆಯನ್ನು ಒಂದು ನಿಮಿಷದಲ್ಲಿ ಪರಿಹರಿಸಬಹುದು’

- Advertisement -
- Advertisement -

ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ರಾಜಕೀಯ ಲಾಭಕ್ಕಾಗಿ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿಗೆ ಆಪ್‌ ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ತಿರುಗೇಟು ನೀಡಿದ್ದಾರೆ. “ಈ ಬಿಕ್ಕಟ್ಟಿನ ಸಮಯದಲ್ಲಿ ರೈತರ ಪರ ನಿಂತರೆ, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರೇ ಅದು ರಾಜಕೀಯ ಎನ್ನುವುದಾದರೇ..ಹೌದು ನಾವು ತಪ್ಪಿತಸ್ಥರೇ” ಎಂದು ಹೇಳಿದ್ದಾರೆ.

ರೈತರ ಮೇಲೆ ಬಿಜೆಪಿ ಆಡಳಿತದ ಹರಿಯಾಣ ಮತ್ತು ದೆಹಲಿಯಲ್ಲಿ ಪೊಲೀಸರು ನಡೆಸಿರುವ ದಾಳಿಯ ಕುರಿತು ಬಿಜೆಪಿ ಮೇಲೆ ರಾಘವ್ ಚಾಡ್ಡಾ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಮನಸ್ಸು ಮಾಡಿದರೇ, ಷರತ್ತುಬದ್ಧ ಮಾತುಕತೆಯನ್ನು ಬಿಟ್ಟು ಬೇಷರತ್ತಾದ ಮಾತುಕತೆಗೆ ರೈತರನ್ನು ಕರೆದು ಸಭೆ ನಡೆಸಿದರೆ ಸಮಸ್ಯೆಯನ್ನು ಒಂದು ನಿಮಿಷದಲ್ಲಿ ಪರಿಹರಿಸಬಹುದು ಎಂದಿದ್ದಾರೆ.

“ರೈತರು ಈಗ ಬಿಕ್ಕಟ್ಟಿನ ಸಮಯದಲ್ಲಿದ್ದಾರೆ. ಈ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ರಾಜಕೀಯವಾಗಿದ್ದರೆ, ನಾವು ಅದನ್ನು ಮಾಡುತ್ತಿದ್ದೇವೆ ಹಾಗಾಗಿ, ನಾವು ತಪ್ಪಿತಸ್ಥರೇ. ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರೆ ಅದು ರಾಜಕೀಯ ಎನ್ನುವುದಾದರೇ, ನಾವು ತಪ್ಪಿತಸ್ಥರೇ. ನಮ್ಮ ಹೃದಯವು ರೈತರಿಗಾಗಿ ಮಿಡಿಯುತ್ತದೆ. ನಾವು ಅವರೊಂದಿಗೆ ನಿಲ್ಲುತ್ತೇವೆ. ಇದು ರೈತರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ. ಇದನ್ನು ಬೆಂಬಲಿಸಲು ನಾವು ಇಲ್ಲಿದ್ದೇವೆ “ಎಂದು ಚಾಡ್ಡಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

“ಈ ವಿಷಯವನ್ನು ಕೇಂದ್ರ ಸರ್ಕಾರ ಒಂದು ನಿಮಿಷದಲ್ಲಿ ಪರಿಹರಿಸಬಹುದು. ಅವರು ಮಾಡಬೇಕಾಗಿರುವುದು ಫೋನ್ ತೆಗೆದುಕೊಂಡು ರೈತರಿಗೆ ಬೇಷರತ್ತಾದ ಸಂವಾದಕ್ಕೆ ಅವಕಾಶ ನೀಡುವುದು ಅಷ್ಟೇ. ದುರದೃಷ್ಟವಶಾತ್, ಸರ್ಕಾರ ಇದನ್ನು ಅಹಂಮ್ಮಿನ ಯುದ್ಧವಾಗಿ ಮಾಡಿ, ರೈತರೊಂದಿಗೆ ಮಾತನಾಡದೇ ರಹಸ್ಯ ಸಭೆಗಳನ್ನು ನಡೆಸುತ್ತಿದೆ. ಇದು ರೈತರ ಬಗ್ಗೆ ಮೋದಿ ಸರ್ಕಾರಕ್ಕೆ ಇರುವ ನಿರಾಸಕ್ತಿಯನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಅವರ ಸಂಪುಟ ಸಚಿವರೊಂದಿಗೆ, ಅಧಿಕಾರಿಗಳೊಂದಿಗೆ  ಅನೇಕ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿರುವ ಕುರಿತು ಆಪ್ ಪಕ್ಷ ಉಲ್ಲೇಖಿಸಿದೆ.

’ದೆಹಲಿ ಚಲೋ’ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ರೈತರಿಗೆ ಆಹಾರ, ನೀರು, ವಿದ್ಯುತ್ ವ್ಯವಸ್ಥೆ ಮಾಡಿದೆ.

ಬಿಜೆಪಿಯ ಐಟಿ ಸೇಟಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ದೆಹಲಿ ಸರ್ಕಾರವು ಈಗಾಗಲೇ ಮೊದಲು ಕೃಷಿ ಕಾನೂನುಗಳನ್ನು ಜಾರಿಗೊಳಿಸಿದೆ. ಈಗ ಕಾನೂನುಗಳನ್ನು ವಿರೋಧಿಸಲು ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಬಂದಿದ್ದು, ಅವರನ್ನು ಬೆಂಬಲಿಸುತ್ತಿದೆ. ಆಪ್ ಸರ್ಕಾರ ಎಂದಿಗೂ ರೈತರ ಪರ ಇರಲಿಲ್ಲ. ಇದು ಕೇವಲ ರಾಜಕೀಯ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...